ಕಾಸರಗೋಡು: ವಿವಾಹ ಸಿದ್ಧತೆಯಲ್ಲಿದ್ದ ಮನೆಯಿಂದ 13 ಪವನ್ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿಯನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ನೆಕ್ರಾಜೆಯ ಎಂ .ಪಿ ಹರೀಶ್ ಕುಮಾರ್ (36) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಮುಳ್ಳೇರಿಯದ ಅಶೋಕ್ ಎಂಬಾತನನ್ನು ಕೆಲ ದಿನಗಳ ಹಿಂದೆ ಬಂಧಿಸಲಾಗಿತ್ತು. ಕಳೆದ ಜನವರಿ 31 ರಂದು ಕಳವು ನಡೆದಿತ್ತು. ಬಾರಡ್ಕದ ಶರತ್ ಎಂಬವರ ಮನೆಗೆ ನುಗ್ಗಿ 12 ಪವನ್ ಚಿನ್ನಾಭರಣ ಕಳವು ಮಾಡಲಾಗಿತ್ತು. ಮಾರ್ಚ್ ನಲ್ಲಿ ಮಗಳ ವಿಹಾಹಕ್ಕೆ ಚಿನ್ನಾಭರಣವನ್ನು ಖರೀದಿಸಿ ಇಡಲಾಗಿತ್ತು.
ಮನೆಯವರು ಸಂಜೆ 7 ಗಂಟೆಗೆ ಮನೆಗೆ ಬೀಗ ಹಾಕಿ ಬದಿಯಡ್ಕ ಪೇಟೆಗೆ ತೆರಳಿದ್ದರು. ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿತ್ತು. ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಈ ಕೃತ್ಯ ನಡೆಸಲಾಗಿತ್ತು. ಈ ಬಗ್ಗೆ ಲಭಿಸಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.