ಕಾರವಾರ ; ಜಿಂಕೆಯೊಂದನ್ನು ಕಾಡಿನಿಂದ ಹಿಡಿದು ಸಾಕುತಿದ್ದ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲಕೊಪ್ಪದಲ್ಲಿ ಈ ಘಟನೆ ನಡೆದಿದ್ದು , ಸಂಚಾರಿ ಅರಣ್ಯ ಘಟಕ ದಳದವರು ಮನೆ ಮೇಲೆ ದಾಳಿ ನಡೆಸಿ, ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಹಬೀಬ್ ರೆಹಮಾನ ಮಹ್ಮದ್ ಸಾಬ್(46) ಎಂದು ಗುರುತಿಸಲಾಗಿದೆ. ಈತನು ಕಾಡಿನಲ್ಲಿದ್ದ ಜಿಂಕೆಯನ್ನು ಹಿಡಿದು ಬಂಧಿಸಿ ಆರು ತಿಂಗಳಿಂದ ಮನೆಯಲ್ಲಿ ಇಟ್ಟುಕೊಂಡಿದ್ದ.
ಖಚಿತ ಮಾಹಿತಿ ಮೇರೆಗೆ ದಾಂಡೇಲಿ ಸಂಚಾರಿ ಅರಣ್ಯ ಪೊಲೀಸ್ ದಳ ದಾಳಿ ನಡೆಸಿದ್ದಾರೆ. ಆರೋಪಿಯನ್ನು ಆರಣ್ಯ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯದ ವಶಕ್ಕೆ ನೀಡಿದ್ದು, ಆರೋಪಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಜಿಂಕೆಯನ್ನು ವಶಪಡಿಸಿಕೊಂಡು ಶಿರಸಿ ಅರಣ್ಯ ಇಲಾಖೆ ಸುಪರ್ದಿಗೆ ನೀಡಿದ್ದು, ಕಾರ್ಯಾಚರಣೆಯಲ್ಲಿ ದಾಂಡೇಲಿ ಸಿ.ಐ.ಡಿ ಅರಣ್ಯ ಘಟಕದ ಪಿ.ಎಸ್.ಐ. ಮಂಜುನಾಥ ಬೋರಕರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಜಿಂಕೆಯನ್ನು ಆರು ತಿಂಗಳ ಕಾಲ ಅಕ್ರಮವಾಗಿ ಸಾಕುತಿದ್ದ ವ್ಯಕ್ತಿಯ ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.