ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಅಂದ್ರಟ್ಟ ಎಂಬಲ್ಲಿ ಬೆದ್ರಾಳ ಹೊಳೆಯಲ್ಲಿನ ಕಿಂಟಿಅಣೆಕಟ್ಟುವಿನಲ್ಲಿ ಕಾಲುಜಾರಿ ಹೊಳೆಗೆ ಬಿದ್ದು ಕಣ್ಮರೆಯಾದ ಘಟನೆ ಆ.9ರಂದು ನಡೆದ ಬಗ್ಗೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಠಾಣಾ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಮೂಲತಃ ಬೆಟ್ಟಂಪಾಡಿ ನಿವಾಸಿಯಾಗಿದ್ದು ಹಲವು ವರ್ಷಗಳಿಂದ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲುಕ ಅಂದ್ರಟ್ಟ ಎಂಬಲ್ಲಿ ಕೃಷ್ಣಮೂರ್ತಿ ಎಂಬವರಿಗೆ ಸೇರಿದ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜನಾರ್ದನ (32ವ)ರವರು ಹೊಳೆಯಲ್ಲಿ ಕಣ್ಮರೆಯಾದವರು. ಅವರು ಮಧ್ಯಾಹ್ನದ ವೇಳೆ ತೋಟದ ಪಕ್ಕದಲ್ಲಿರುವ ಕಿಂಡಿ ಅಣೆಕಟ್ಟುವಿನ ಬಳಿ ಹೋದಾಗ ಕಾಲು ಜಾರಿ ಹೊಳೆಗೆ ಬಿದ್ದು ಕಣ್ಮರೆಯಾಗಿದ್ದಾರೆ.
ವಿಷಯ ತಿಳಿದ ತಕ್ಷಣ ಪುತ್ತೂರು ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಧಾವಿಸಿದ್ದು, ಕಾರ್ಯಾಚರಣೆ ನಡೆಸಿದ್ದರು. ಆದರೆ ನೀರಿನ ಹರಿವಿನ ವೇಗದ ಹಿನ್ನೆಲೆಯಲ್ಲಿ ಬಿದ್ದ ವ್ಯಕ್ತಿ ಅಲ್ಲಿ ಪತ್ತೆಯಾಗಲು ಸಾಧ್ಯವಿಲ್ಲ ಮತ್ತು ರಾತ್ರಿಯಾದ ಹಿನ್ನೆಲೆಯಲ್ಲಿ ಹುಟಕಾಟಕ್ಕೆ ಸಾಧ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪುತ್ತೂರು ಸಹಾಯಕ ಕಮೀಷನರ್ ಹೆಚ್.ಕೆ.ಕೃಷ್ಣಮೂರ್ತಿ, ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ, ಆರೋಗ್ಯ ನಿರೀಕ್ಷಕಿ ಶ್ವೇತಾ ಕಿರಣ್, ಕಂದಾಯ ನಿರೀಕ್ಷಕ ದಯಾನಂದ ಹೆಗ್ಡೆ, ಸ್ಥಳೀಯ ಹರೀಶ್ ಬೆದ್ರಾಳ ಸೇರಿದಂತೆ ಹಲವಾರು ಮಂದಿ ಆಗಮಿಸಿದ್ದರು.