ಉಳ್ಳಾಲ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಬೋಳಿಯಾರು ಜಾರದಗುಡ್ಡೆಯ ರಂತಡ್ಕ ಸರಕಾರಿ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 103ರಲ್ಲಿ ಮತ ಚಲಾಯಿಸಿದರು.
ಪತ್ನಿ ಲೆಮೀಸ್ ಖಾದರ್ ಅವರು ಜತೆಗಿದ್ದು ಮತ ಚಲಾಯಿಸಿದರು.
ಬೆಂಬಲಿಗರ ಜತೆಗೆ ಮತಗಟ್ಟೆಗೆ ಆಗಮಿಸಿದ್ದ ಸಚಿವರು ಮತದಾನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮಿಥುನ್ ರೈ ಅತುತ್ತಮ ಅಭ್ಯರ್ಥಿ. ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ. ಜನರ ಭಾವನೆಗಳೊಂದಿಗೆ ಬಿಜೆಪಿ ಮತ ಪಡೆಯುತ್ತಿದೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಜನರ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನರಿಂದ ಮತ ಪಡೆಯುತ್ತದೆ ಎಂದರು.