ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್ ವಂಚಿತರಾಗಿರುವಂತಹ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರು ಪಕ್ಷದ ಸ್ಥಳೀಯ ನಾಯಕರೊಬ್ಬರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಅವರು ನನಗೆ ಟಿಕೆಟ್ ನೀಡಿರುವುದಾಗಿ ಖಾತರಿ ಮಾಡಿದ್ದರು. ಆದರೆ ಕೊನೆಕ್ಷಣದಲ್ಲಿ ಟಿಕೆಟ್ ಕೈತಪ್ಪಲು ಸಂಸದ ನಳಿನ್ ಕುಮಾರ್ ಕಟೀಲ್ ಕಾರಣವೆಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ನಳಿನ್ ಗೆಲುವಿಗೆ ಸಾಕಷ್ಟು ಹಣ ಖರ್ಚು ಮಾಡಿದ್ದೆ. ಆದರೆ ಈಗ ನನಗೆ ದ್ರೋಹ ಮಾಡಿದ್ದಾರೆ ಎಂದು ಪಾಲೇಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಬಂಟ್ಸ್ ಸಮುದಾಯಕ್ಕೆ ನಾಲ್ಕು ಸ್ಥಾನ ನೀಡುವ ಮೂಲಕ ಇತರ ಹಿಂದುಳಿದ ವರ್ಗದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದರು.