News Karnataka Kannada
Thursday, May 02 2024
ಕರಾವಳಿ

ಟಿಪ್ಪು ಜಯಂತಿಯಿಂದ ಹೊರಗುಳಿದ ಮಧ್ವರಾಜ್ ಮುಂದಿನ ನಡೆಯೇನು?

Photo Credit :

ಟಿಪ್ಪು ಜಯಂತಿಯಿಂದ ಹೊರಗುಳಿದ ಮಧ್ವರಾಜ್ ಮುಂದಿನ ನಡೆಯೇನು?

ಉಡುಪಿ: ಕಳೆದ ಕೆಲವು ದಿನಗಳಿಂದ ಕ್ರೀಡಾ ಮತ್ತು ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದಕ್ಕೆ ಪೂರಕವೆಂಬಂತೆ ಉಡುಪಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಆಚರಣೆಯಿಂದ ದೂರ ಉಳಿದಿದ್ದಾರೆ.

ಉಡುಪಿಯಲ್ಲೇ ಇದ್ದ ಪ್ರಮೋದ್ ಮಧ್ವರಾಜ್ ಜಿಲ್ಲಾಧಿಕಾರಿ ಕಚೇರಿಯಿಂದ ಆಯೋಜಿಸಲಾದ ಟಿಪ್ಪು ಜಯಂತಿ ಮುಕ್ತಾಯಗೊಂಡ ಹತ್ತು ನಿಮಿಷ ಬಳಿಕ ಆಗಮಿಸಿ ತನ್ನ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದರು.

ಇದರ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಮೋದ್ ಮಧ್ವರಾಜ್, ನನ್ನ ಗೈರನ್ನು ನಿಮಗೆ ಹೇಗೆ ಬೇಕೋ ಹಾಗೆ ಅರ್ಥೈಸಿಕೊಳ್ಳಿ ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ಪ್ರಮೋದ್ ಮಧ್ವರಾಜ್ ಅವರು ಟಿಪ್ಪು ಜಯಂತಿ ಆಚರಣೆಯಲ್ಲಿ ಭಾಗವಹಿಸುತ್ತಿಲ್ಲ.

ನಾನು ಯಾವುದೇ ಜಯಂತಿಯಲ್ಲಿ ಭಾಗವಹಿಸಿಲ್ಲ. ಆಗ ಯಾಕೆ ನೀವು ಪ್ರಶ್ನಿಸಿಲ್ಲ. ಟಿಪ್ಪು ಜಯಂತಿಯಲ್ಲಿ ಭಾಗವಹಿಸಬೇಕೆಂದು ಕಡ್ಡಾಯವೇನಿಲ್ಲ ಎಂದು ಮಧ್ವರಾಜ್ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು