Categories: ಕರಾವಳಿ

ಟಿಸಿಎಸ್ ಐಯಾನ್ -ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಶೈಕ್ಷಣಿಕ ಒಡಂಬಡಿಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಭಾರತದ ಖ್ಯಾತ ಐಟಿ ಕಂಪನಿ ಟಿಸಿಎಸ್ ಐಯಾನ್ ಜತೆಗೆ ಶೈಕ್ಷಣಿಕ ಒಪ್ಪಂದವನ್ನು ಮಾಡಿಕೊಂಡಿದೆ.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ನವಯುಗದ ಉದ್ಯಮ ಹೊಂದಾಣಿಕೆಯ ಕೌಶಲ್ಯ ಹಾಗೂ ಉದ್ಯಮ  ಪ್ರವೃತ್ತಿಯ ಇಂಟರ್ನಶಿಫ್ ಅವಕಾಶವನ್ನು ಟಿಸಿಎಸ್ ಐಯಾನ್‍ನ ಐಎಚ್‍ಸಿ (ಇಂಡಸ್ಟ್ರಿ ಆನರ್ ಸರ್ಟಿಫಿಕೇಶನ್) ಮತ್ತುಆರ್‍ಐಒ(ರಿಮೋಟ್ ಇಂಟರ್ನ್‍ಶಿಪ್ ಅಪಾರ್ಚುನಿಟಿಸ್ ) ಮೂಲಕ ಒದಗಿಸಿ ಕೊಡುತ್ತದೆ.

ಕರ್ನಾಟಕದ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಟಿಸಿಎಸ್ ಐಯಾನ್‍ನ ಒಡಂಬಡಿಕೆಗೆ ಒಳಪಡುತ್ತಿರುವ ಮೊದಲ ಕಾಲೇಜು ಎಂಬ ಹೆಮ್ಮೆಗೆ ಪಾತ್ರವಾಗುತ್ತಿದೆ ಎಂದು ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅವರು ಗುರುವಾರ ಕಚೇರಿಯಲ್ಲಿ ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಟಿಸಿಎಸ್ ಐಯಾನ್, ಟಾಟಾಕನ್ಸಲ್ಟನ್ಸಿ ಸರ್ವೀಸಸ್‍ನ ಭಾಗವಾಗಿದೆ. ಐಯಾನ್‍ನ ಕೋರ್ಸುಗಳು ಆಳ್ವಾಸ್ ವಿದ್ಯಾರ್ಥಿ ಸಮೂಹಕ್ಕೆ ಔದ್ಯೋಗಿಕ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯ ಹಾಗೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗಬಲ್ಲ ಕ್ಷೇತ್ರಗಳಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ರೊಬೋಟಿಕ್ಸ್, ಕ್ಲೌಡ್‍ಕಂಪ್ಯುಟಿಂಗ್, ಡಾಟಾ ಮೈನಿಂಗ್, ಅನಾಲಿಟಿಕ್ಸ್, ಐಒಟಿ ಮತ್ತು ಸೈಬರ್ ಸೆಕ್ಯುರಿಟಿ ಮುಂತಾದ ಏರಿಯಾಗಳಲ್ಲಿ ಪರಿಣತಿ ಹೊಂದಲು ಸಹಾಯ ಮಾಡುತ್ತದೆ. ಟಿಸಿಎಸ್ ಐಯಾನ್, ಟಾಟಾಕನ್ಸಲ್ಟೆನ್ಸಿ ಸೇವೆಯತಂತ್ರಕುಶಲತೆಯ ವ್ಯವಹಾರಘಟಕವಾಗಿದ್ದು, ವಿವಿಧ ಸಂಸ್ಥೆಗಳ, ಸರಕಾರಿ ಇಲಾಖೆಗಳ, ವ್ಯವಹಾರೋದ್ಯಮದ ವಿಭಿನ್ನ ಕ್ಷೇತ್ರಗಳ ನೇಮಕಾತಿ ಪ್ರಕ್ರಿಯೆಗಳನ್ನು ಕೌಶಲ್ಯಗಳ ಮೂಲಕ ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಇದರಜೊತೆಗೆ ವ್ಯಾವಹಾರಿಕ ಕಾರ್ಯಸೂಚಿಗಳನ್ನು `ಫಿಜಿಟಲ್ ಪ್ಲಾಟ್‍ಫಾರ್ಮ್’ ಮೂಲಕ ನಡೆಸುವಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ. ಈ ವೇದಿಕೆಯು ಭೌತಿಕ ಕ್ರಿಯೆಗಳನ್ನು ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಪರಿಣಾಮಕಾರಿಯಾಗಿ ನೇರವೇರಿಸುತ್ತಿದೆ ಎಂದು ಡಾ.ಎಂ ಮೋಹನ ಆಳ್ವ ತಿಳಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಪೀಟರ್ ಫೆರ್ನಾಂಡೀಸ್, ಆಳ್ವಾಸ್ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ಸುಶಾಂತ್ ಅನಿಲ್ ಲೋಬೊ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಆಳ್ವಾಸ್ ಮತ್ತು ಟಿಸಿಎಸ್ ಐಯಾನ್ ಮಧ್ಯೆ ಒಪ್ಪಂದವಾಗಿರುವುದು ನಿಜಕ್ಕೂ ಸಂತಸದ ವಿಷಯ. ಈ ನೂತನ ಒಡಂಬಡಿಕೆಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಳ್ಳಲು ಹಾಗೆಯೇ ಹೊಸ ಉದ್ಯೋಗಗಳಿಗೆ ತಮ್ಮನ್ನು ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ಆಳ್ವಾಸ್ ಯಾವತ್ತಿಗೂ ಔದ್ಯೋಗಿಕ ಕ್ಷೇತ್ರದ ಪ್ರಾಯೋಗಿಕತೆಗಳು ಹಾಗೂ ಶೈಕ್ಷಣಿಕಕ್ಷೇತ್ರದ ಮಧ್ಯೆದಅಂತರವನ್ನು ಕಡಿಮೆಗೊಳಿಸಲು ಹೆಚ್ಚಿನ ಆಸ್ಥೆ ತೋರಿಸುತ್ತ ಬಂದಿದೆ.

ಡಾ. ಎಂ.ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ

Desk

Recent Posts

ಹೂಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

46 seconds ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

10 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

14 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

19 mins ago

ಗ್ರಾಹಕರಂತೆ ಬಂದು ಬಂಗಾರದ ಬಳೆ ಎಗರಿಸಿದ ಖತರ್ನಾಕ್ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್‌ನಲ್ಲಿ…

22 mins ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

40 mins ago