Categories: ಕರಾವಳಿ

ಟೈಲರ್ ನ ಅಪಹರಿಸಿ ನಗ-ನಗದು ದರೋಡೆ

ಉಳ್ಳಾಲ:  ಟೈಲರ್ ಓರ್ವರನ್ನು ನಾಲ್ವರು ಅಪರಿಚಿತರ ತಂಡ ಸ್ಕಾರ್ಪಿಯೋ ವಾಹನದಲ್ಲಿ ಅಪಹರಿಸಿರುವ ಘಟನೆ ಮುಡಿಪು ಜಂಕ್ಷನ್ ನಲ್ಲಿ ಶುಕ್ರವಾರ ತಡರಾತ್ರಿ  ವೇಳೆ ನಡೆದಿದ್ದು,  ಅಪಹರಣಗೈದ ಆಗಂತುಕರು ಹಲ್ಲೆಗೈದು ಅವರಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ದರೋಡೆ ನಡೆಸಿ  ಪುತ್ತೂರು ಸಮೀಪ ರಸ್ತೆಗೆ ಎಸೆದು ಹೋಗಿರುವುದಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು ತಿಳಿಸಿದ್ದಾರೆ.


 ಮೂಲತ: ಮಾಣಿ ನಿವಾಸಿ  ಧರಣಪ್ಪ ಪೂಜಾರಿ (42) ಅಪಹರಣಗೊಳಗಾದವರು.  ಮುಡಿಪು ಪೋಸ್ಟ್ ಆಫೀಸ್ ಸಮೀಪ ಬಾಡಿಗೆ ಮನೆ ಹೊಂದಿರುವ ಅವರು ಮುಡಿಪು ಜಂಕ್ಷನ್ನಿನಲ್ಲಿ ಡಿ.ಎಂ.ಟೈಲರ್ಸ್ ಎಂಬ  ಟೈಲರ್ ಅಂಗಡಿಯನ್ನು ಹೊಂದಿದ್ದಾರೆ. ಶುಕ್ರವಾರ ತಡರಾತ್ರಿ 9.30 ಸುಮಾರಿಗೆ ಅಂಗಡಿಯನ್ನು ಮುಚ್ಚಿ ಹೋಗುವ ಸಂದರ್ಭ , ಆಗಂತುಕನೋರ್ವ ಗ್ರಾಹಕನ ಸೋಗಿನಲ್ಲಿ ಬಂದು ಪ್ಯಾಂಟ್ ಹೊಲಿಯಲಿದೆ ಎಂದು ತಿಳಿಸಿದ್ದಾನೆ. ಅದರಂತೆ ಅಂಗಡಿ ಮುಚ್ಚಿದ್ದರಿಂದಾಗಿ ಆತನಿದ್ದ ಸ್ಕಾರ್ಪಿಯೋ ಬಳಿ ತೆರಳುತ್ತಿದ್ದಂತೆ ಸ್ಕಾರ್ಪಿಯೋ ವಾಹನದಲ್ಲಿದ್ದ ನಾಲ್ವರು ಸೇರಿಕೊಂಡು ವಾಹನದೊಳಕ್ಕೆ ಧರಣಪ್ಪ ಅವರನ್ನು ಹಾಕಿ ಅಪಹರಿಸಿದ್ದಾರೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಅವರ ಪತ್ನಿ ಜಯಲಕ್ಷ್ಮೀ ಎಂಬವರು ಅಪಹರಣ ಪ್ರಕರಣ ಶುಕ್ರವಾರ ತಡರಾತ್ರಿ ದಾಖಲಿಸಿದ್ದರು.

`ಪುತ್ತೂರಿನಲ್ಲಿ ಎಸೆದರು’ : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ದಾಖಲಾದ ಧರಣಪ್ಪ ಅವರ ಹೇಳಿಕೆಯಂತೆ ಮುಡಪುವಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಅಪಹರಣಗೈದ ತಂಡ ಮೊದಲಿಗೆ ಕೇರಳ ಕಡೆಗೆ  ಕೊಂಡೊಯ್ದಿತ್ತು. ಅಲ್ಲಿಂದ ಮರಳಿ ಮಂಗಳೂರು ಕಡೆಗೆ ಕೊಂಡೊಯ್ದಿದ್ದರು. ಬಳಿಕ  ಉಪ್ಪಿನಂಗಡಿ ಕಡೆಗೆ ಕೊಂಡೊಯ್ಯುವ ಸಂದರ್ಭ ಸೇತುವೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿರುವುದನ್ನು ಕಂಡು ಅಲ್ಲಿಂದ ಹಿಂದಕ್ಕೆ ತೆರಳಿ ಹಲ್ಲೆಗೈದು ಕೈಯಲ್ಲಿದ್ದ ರೂ.10,000 ನಗದು ಹಾಗೂ  ನಾಲ್ಕು ಪವನ್ ತೂಕದ ಚಿನ್ನದ ಸರವರನ್ನು ಕಳವುಗೈದು, ವಾಹನದಿಂದ ಹೊರದೂಡಿ ಪರಾರಿಯಾಗಿದ್ದಾರೆ. ಗಾಯಗೊಂಡು ರಾತ್ರಿಯಿಡೀ ಸ್ಥಳ ಯಾವುದೆಂದು ತಿಳಿಯದೆ ಬಸ್ ನಿಲ್ದಾಣದಲ್ಲಿ ಮಲಗಿ ಬಳಿಕ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಶನಿವಾರ ಬೆಳಿಗ್ಗೆ ರಿಕ್ಷಾ ಮೂಲಕ ತೆರಳಿ ಒಳರೋಗಿಯಾಗಿ ದಾಖಲಾಗಿದ್ದಾರೆ.  ಘಟನೆ ಹಿಂದೆ ಮುಡಿಪುವಿನ ಕುಖ್ಯಾತಿ ರಫೀಕ್ ಎಂಬಾತನ ಕೈವಾಡ ಇರುವುದಾಗಿ ಪೊಲೀಸರಿಗೆ ತಿಳಿದುಬಂದಿದೆ. ತನಿಖೆ ಮುಂದುವರಿಸಿದ್ದಾರೆ.    
 

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago