News Karnataka Kannada
Sunday, May 19 2024
ಕರಾವಳಿ

ಡಾಂಬರು ಡಬ್ಬಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅನಿಮಲ್ ಕೇರ್ ಟ್ರಸ್ಟ್

Photo Credit :

ಡಾಂಬರು ಡಬ್ಬಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅನಿಮಲ್ ಕೇರ್ ಟ್ರಸ್ಟ್

ಮಂಗಳೂರು: ನಗರದ ಹೊರವಲಯದ ಬಜ್ಪೆ ಬಳಿ ಡಾಂಬರು ಡಬ್ಬಿಗೆ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಾಯಿಯನ್ನು ಮಂಗಳೂರಿನ ಅನಿಮಲ್ ಕೇರ್‌ ಟ್ರಸ್ಟ್ ಸಿಬ್ಬಂದಿ ರಕ್ಷಿಸಿದ್ದಾರೆ.

ಬಜ್ಪೆ ಸಮೀಪ ರಸ್ತೆ ಡಾಂಬರೀಕರಣಕ್ಕಾಗಿ ಡಾಂಬರು ಡಬ್ಬಿಗಳನ್ನು ಇಡಲಾಗಿತ್ತು. ಈ ವೇಳೆ ಬೀದಿ ನಾಯಿಯೊಂದು ಆಕಸ್ಮಿಕವಾಗಿ ಡಾಂಬರು ಡಬ್ಬಿ ಒಳಗೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಕ್ತಿ ನಗರದ ಅನಿಮಲ್ ಕೇರ್ ಟ್ರಸ್ಟ್ ಸದಸ್ಯರು, ಡಾಂಬರಿನಲ್ಲಿ ಅದ್ದಿ ಹೋಗಿದ್ದ ನಾಯಿಯನ್ನು ಮೇಲೆತ್ತಿದ್ದಾರೆ.

ಕೂಡಲೇ ತಮ್ಮ ಶಕ್ತಿನಗರದ ಅನಿಮಲ್ ಕೇರ್ ಸೆಂಟರಿಗೆ ಕೊಂಡೊಯ್ದು ಸುಮಾರು ಹತ್ತು ಲೀಟರ್‌ನಷ್ಟು ಅಡುಗೆ ಎಣ್ಣೆಯನ್ನು ನಾಯಿಯ ಮೈಗೆ ಸುರಿದಿದ್ದಾರೆ. ನಿಧಾನಕ್ಕೆ ನಾಯಿ ಮೈಯಲ್ಲಿ ಅಂಟಿದ್ದ ಹತ್ತು ಕೆಜಿಯಷ್ಟು ಡಾಂಬರನ್ನು ಬಟ್ಟೆಯಿಂದ ಉಜ್ಜಿ ತೆಗೆದಿದ್ದಾರೆ. ಸದ್ಯ ನಾಯಿ ಚೇತರಿಕೆ ಕಂಡಿದ್ದು ಮರುಜನ್ಮ ಪಡೆದಂತಾಗಿದೆ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

192
Shreyas Vittal

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು