News Karnataka Kannada
Monday, May 20 2024
ಕರಾವಳಿ

ತಜ್ಞರ ಸಲಹೆ ಪಡೆದು ಕುಸಿದ ಕಾರಿಂಜ ತಡೆಗೋಡೆ ಪುನರ್‌ನಿರ್ಮಾಣ: ಶಾಸಕ ರಾಜೇಶ್ ನಾಯ್ಕ್

Photo Credit :

ತಜ್ಞರ ಸಲಹೆ ಪಡೆದು ಕುಸಿದ ಕಾರಿಂಜ ತಡೆಗೋಡೆ ಪುನರ್‌ನಿರ್ಮಾಣ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕಳೆದ ಎರಡು ದಿನಗಳ ಹಿಂದೆ ಕುಸಿದು ಬಿದ್ದಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆಯ ಪುನರ್ ನಿರ್ಮಾಣ  ಕಾಮಗಾರಿಯನ್ನು  ತಜ್ಞರ  ಮಾರ್ಗದರ್ಶನ ಪಡೆದು ಶೀಘ್ರ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಹೇಳಿದರು.

ಅವರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪತ್ರಕರ್ತರ ಜೊತೆ ಮಾತನಾಡಿದರು.

ತನ್ನ ಶಿಫಾರಸ್ಸಿನಂತೆ ತಾಲೂಕಿನಲ್ಲಿ ಕಾರಿಂಜ ದೇವಸ್ಥಾನ ಸಹಿತ ಈಗಾಲೇ ನಾಲ್ಕು ಕ್ಷೇತ್ರಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದ್ದು, ಕಾರಿಂಜ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಹೇಳಿದರು.

ಇದೇ ವೇಳೆ ಸರಕಾರಿ ಜಮೀನಿನಲ್ಲಿ  ನಡೆಯುತ್ತಿರುವ  ಅಕ್ರ‌ಮ ಗಣಿಗಾರಿಕೆಯಿಂದ ದೇವಸ್ಥಾನದ ತಡೆಗೋಡೆಗೆ ಹಾನಿಯುಂಟಾಗಿದೆ ಎಂದು ಸ್ಥಳೀಯರು ಶಾಸಕರಲ್ಲಿ ದೂರಿಕೊಂಡರು. ಈ ಕುರಿತು ಪ್ರತಿಕ್ರಿಯಿಸಿದ ಶಾಸಕರು,  ಕಂದಾಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಹದಿನೈದು ದಿನಗಳ ಒಳಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.  ಯಾವುದೇ ಅಕ್ರಮಗಳಿಗೆ ಅವಕಾಶ ಕೊಡುವುದಿಲ್ಲ ಎಂದವರು ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು