News Karnataka Kannada
Friday, May 03 2024
ಕರಾವಳಿ

ತಲಪಾಡಿಯಲ್ಲಿ ಗಡಿ ನಿರ್ಬಂಧ ವಿರೋಧಿಸಿ ಪ್ರತಿಭಟನೆ

Protest
Photo Credit :

ಮಂಗಳೂರು: ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಬರುವ ಜನರಿಗೆ ಪ್ರವೇಶ ನಿರ್ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕೇರಳದ ವಿವಿಧ ಸಂಘಟನೆಗಳ ವತಿಯಿಂದ ಅಂತಾರಾಜ್ಯ ಗಡಿ ಪ್ರದೇಶ ತಲಪಾಡಿಯಲ್ಲಿ ಸೋಮವಾರ ಬೆಳಗ್ಗೆ ಬೃಹತ್ ಪ್ರತಿಭಟನೆ ನಡೆಯಿತು.
ಕಾಸರಗೋಡು ಜಿಲ್ಲಾಧಿಕಾರಿ ಸ್ವಾಗತ್ ಭಂಡಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಪ್ರತಿಭಟನಕಾರರ ಅಹವಾಲು ಸ್ವೀಕರಿಸಿದರು.
ಅಂತಾರಾಜ್ಯ ಪ್ರಯಾಣವನ್ನು ನಿರ್ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನ ಉಲ್ಲಂಘಿಸಿ ಕರ್ನಾಟಕ ಸರ್ಕಾರ ಗಡಿ ಬಂದ್ ನಡೆಸಿ ಉಭಯ ರಾಜ್ಯಗಳ ಗಡಿ ಪ್ರದೇಶದ ಜನರನ್ನು ಸಂಕಷ್ಟದಲ್ಲಿ ಸಿಲುಕಿಸಿದೆ ಎಂದು ಪ್ರತಿಭಟನಕಾರರು ಕೋವಿಡ್ ಲಸಿಕೆ ವರದಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾದ್ ವರ್ಕಾಡಿ, ಹಿಂದೆ ಗಡಿ ಬಂದ್ ಸಂದರ್ಭ ನಾವು ಸಹಕರಿಸಿದ್ದೇವೆ. ಆದರೆ ಕೇಂದ್ರ ಸರ್ಕಾರವೇ ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಅಂತಾರಾಜ್ಯ ಪ್ರಯಾಣ ನಿರ್ಬಂಧಿಸುವಂತಿಲ್ಲ ಎಂದು ಹೇಳಿದೆ. ಆದ್ದರಿಂದ ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆಯೇ ಕರ್ನಾಟಕ ಪ್ರವೇಶಕ್ಕೆ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು