News Karnataka Kannada
Monday, May 20 2024
ಕರಾವಳಿ

ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಆದ್ಯತೆ: ಮಿಥುನ್ ರೈ

Photo Credit :

ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಆದ್ಯತೆ: ಮಿಥುನ್ ರೈ

ಸುಳ್ಯ: ತಳಮಟ್ಟದಿಂದ  ಪಕ್ಷ ಸಂಘಟನೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿ   ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆ ಸೇರಿ ಪ್ರತಿ  ಚುನಾವಣೆಯಲ್ಲಿಯೂ ಗೆಲುವು ಸಾಧಿಸುವಂತಾಗಬೇಕು. ಅದಕ್ಕಾಗಿ ಎಲ್ಲ ನಾಯಕರು, ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದರು.

ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಅದೆಷ್ಟೋ ಮಂದಿಗೆ ಆಶಾಕಿರಣವಾಗಿರುವ ಹಲವು ಸಂಸ್ಥೆಗಳನ್ನು ನಮ್ಮ ಜಿಲ್ಲೆಯಲ್ಲಿ ಉಳಿಸಿಕೊಳ್ಳಲು ಸಂಸದರಿಗೆ, ಶಾಸಕರುಗಳಿಗೆ ಸಾಧ್ಯವಾಗುತ್ತಿಲ್ಲ. ಅವರಿಗೆ ಅಭಿವೃದ್ಧಿಯ ಕುರಿತು ಇಚ್ಚಾಶಕ್ತಿಯೇ ಇಲ್ಲ ಎಂದು ಅವರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಕಾಂಗ್ರೆಸ್ ನಾಯಕರಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ, ಯುವ ಕಾಂಗ್ರಸ್ ಸುಳ್ಯ ತಾಲೂಕು ಅಧ್ಯಕ್ಷ ಸಿದ್ದೀಕ್,  ಎಸ್.ಸಂಶುದ್ದೀನ್, ಎಂ.ವೆಂಕಪ್ಪ ಗೌಡ, ಜಿ.ಕೆ.ಹಮೀದ್, ಕಿರಣ್ ಬುಡ್ಲೆಗುತ್ತು, ಪಿ.ಎಸ್.ಗಂಗಾಧರ, ಸುರೇಶ್ ಅಮೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಸಮಾಧಾನ ಸ್ಫೋಟ

ಸಭೆ ನಡೆಯುತ್ತಿದ್ದಂತೆ ಕಾಂಗ್ರೆಸ್ ನಾಯಕರ ಅಸಮಾಧಾನ ಸ್ಫೋಟಗೊಂಡ ಘಟನೆಗೂ ಸಭೆ ಸಾಕ್ಷಿಯಾಯಿತು. ಕಾಂಗ್ರೆಸ್ ಮುಖಂಡರಿಂದಲೇ ಸುಳ್ಯದಲ್ಲಿ ಕಾಂಗ್ರೆಸ್‍ಗೆ ಸೋಲಾಗುತಿದೆ ಎಂದು ಕೆಲವು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಗದ್ದಲ, ಗೊಂದಲ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಜಿಲ್ಲಾಧ್ಯಕ್ಷ ಮಿಥುನ್ ರೈ ನಾಯಕರನ್ನು ಸಮಾಧಾನಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು