ಮೂಡುಬಿದಿರೆ: ಸಾರ್ವಜನಿಕರಿಂದ ಬಂದ ದೂರಿನ ಹಿನ್ನಲೆಯಲ್ಲಿ ಇಲ್ಲಿನ ತಹಸೀಲ್ದಾರ್ ಕಚೇರಿಗೆ ಧಿಡೀರ್ ಭೇಟಿ ಶಾಸಕ ಉಮಾನಾಥ ಕೋಟ್ಯಾನ್ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ತಹಸೀಲ್ದಾರ್ ಕಚೇರಿ ಪಕ್ಕದಲ್ಲಿರುವ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭ, ತಹಸೀಲ್ದಾರ್ನಲ್ಲಿ ಅರ್ಜಿ ಸಲ್ಲಿಸಲು ಬಂದಿರುವವರು ಅಲ್ಲಿಗೆ ಬಂದು ಶಾಸಕರಿಗೆ ಕಚೇರಿ ಸಿಬ್ಬಂದಿಗಳ ವಿಡಿಯೋ ಸಾಕ್ಷಿ ಸಹಿತ ಕಾರ್ಯವೈಖರಿ ಬಗ್ಗೆ ತಿಳಿಸಿದರು.
ತಕ್ಷಣ ಸ್ಪಂದಿಸಿದ ಕೋಟ್ಯಾನ್ ನೇರವಾಗಿ ತಹಸೀಲ್ದಾರ್ ಕಚೇರಿಗೆ ತರಾಟೆಗೆ ತೆಗೆದುಕೊಂಡರು. ಕೆಲಸ ಅವಧಿಯಲ್ಲಿ ಮೊಬೈಲ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದರು.