News Karnataka Kannada
Wednesday, May 08 2024
ಕರಾವಳಿ

ತೈಲ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Photo Credit :

ತೈಲ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬಂಟ್ವಾಳ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಬೆಲೆ ಪಾತಾಳಕ್ಕೆ ಕುಸಿದರೂ, ಕೇಂದ್ರ ಸರ್ಕಾರ ಜನರನ್ನು ಮರುಳು ಮಾಡಿ ಪೆಟ್ರೋಲ್, ಡಿಸೇಲ್ ಏರಿಕೆ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದರು.

ಅವರು ಸೋಮವಾರ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿ.ಸಿ.ರೋಡು ಕೈಕಂಬದಿಂದ ಬಿ.ಸಿ.ರೋಡು ಜಂಕ್ಷನ್ ವರೆಗೆ ನಡೆದ ಪ್ರತಿಭಟನಾ ಪಾದಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದರು.

ಹಿಂದೆ ಯುಪಿಎ ಅವಧಿಯಲ್ಲಿ ತೈಲ ಬೆಲೆ 140 ಡಾಲರ್ ಇದ್ದಾಗ, ಪೆಟ್ರೋಲ್, ಡಿಸೇಲ್ ಬೆಲೆ 60 ರೂ.ಗಳಿಗಿಂತಲೂ ಕಡಿಮೆ ಇತ್ತು. ಆದರೆ ಈಗ 40 ಡಾಲರ್ ಗೆ ತಲುಪಿದರೂ, ಕೇಂದ್ರ ಸರ್ಕಾರ ಬೆಲೆಯನ್ನು ಗಗನಕ್ಕೇರಿಸುತ್ತಿದೆ. ಇದರಿಂದಾಗಿ ದಿನಬಳಕೆಯ ವಸ್ತುಗಳಿಗೂ ಬೆಲೆ ಏರಿಕೆಯಾಗುವ ಅಪಾಯ ಎದುರಾಗಿದೆ ಎಂದು ಆರೋಪಿಸಿದರು. ದೇಶದ ಆರ್ಥಿಕ ಸಂಕಷ್ಟಕ್ಕೆ ಕೊರೋನಾ ಒಂದೇ ಕಾರಣವಲ್ಲ, ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವೂ ಕಾರಣ ಎಂದವರು ಟೀಕಿಸಿದರು.

ಪಾದಯಾತ್ರೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ಖಂಡಿಸಿ ಜೀಪಿಗೆ ಹಗ್ಗ ಕಟ್ಟಿ ಏಳೆಯಲಾಯಿತು. ಬಳಿಕ ತಹಶೀಲ್ದಾರ್ ಮೂಲಕ ಬೆಲೆ ಇಳಿಕೆಗೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು