ಉಳ್ಳಾಲ : ಬೈಕ್ ಕಾರು ನಡುವೆ ಸಂಭವಿಸಿದ ಅಪಘಾತ ದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ
ಚೆಂಬುಗುಡ್ಡೆ ನಿವಾಸಿಗಳಾದ ಚರಣ್ ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು. ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಮುಂದಿನಿಂದ ಇದ್ದ ಕಾರು ಬಲಭಾಗಕ್ಕೆ ತಿರುಗಲು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದಿದೆ.
ಕಾರು ಚಾಲಕ ಮಹಮ್ಮದ್ ಅಜ್ಮಲ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅವೈಜ್ಞಾನಿಕ ರಸ್ತೆ ತೆರವು: ಕಾಪಿಕಾಡು ಭಾಗದಲ್ಲಿ ರಾ.ಹೆ 66 ರನ್ನು ಅವೈಜ್ಞಾನಿಕ ರೀತಿಯಲ್ಲಿ ತೆರವು ಮಾಡಲಾಗಿದೆ. ಈ ಕುರಿತು ಈ ಹಿಂದೆಯೇ ಮಾಧ್ಯಮಗಳು ಎಚ್ಚರಿಸಿದ್ದರೂ ತೆರವು ಮುಚ್ಚಲಾಗಿಲ್ಲ. ಇದು ಅಪಘಾತವನ್ನು ಆಹ್ವಾನಿಸುತ್ತಿದೆ.