ಮಂಗಳೂರು: ದಕ್ಷಿಣ ಕನ್ನಡದಲ್ಲಿ ಸೋಮವಾರ 233 ಮಂದಿಗೆ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20367ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿಗೆ ಸೋಮವಾರ ಎಂಟು ಮಂದಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಮೃತರ ಸಂಖ್ಯೆ 490ಕ್ಕೆ ಏರಿಕೆಯಾಗಿದೆ.
ಮಂಗಳೂರು ತಾಲೂಕಿನ 122, ಬಂಟ್ವಾಳದ 53, ಪುತ್ತೂರಿನ 6, ಸುಳ್ಯದ 5, ಬೆಳ್ತಂಗಡಿಯ 10 ಮತ್ತು ಇತರ ಜಿಲ್ಲೆಗಳಲ್ಲಿ 37 ಮಂದಿಗೆ ಸೋಮವಾರ ಕೊರೊನಾ ದೃಢಪಟ್ಟಿದೆ.
ಅವರಲ್ಲಿ 78 ಮಂದಿಗೆ ಸೋಂಕಿತರ ಸಂಪರ್ಕದಿಂದ, 105 ಮಂದಿಗೆ ಇನ್ಪುಯೆಂಜಾ ಲೈಕ್ಇಲ್ನೆಸ್ ಕಂಡುಬಂದಿದ್ದು, 9 ಮಂದಿಗೆ ಉಸಿರಾಟ ಸಮಸ್ಯೆಯಿಂದ ಚಿಕಿತ್ಸೆಗೆ ತೆರಳಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಸೋಮವಾರ 404 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಮನೆಗಳಿಂದ 219 ಮತ್ತು ಆಸ್ಪತ್ರೆಗಳಿಂದ 185 ಮಂದಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಒಟ್ಟು 15,505 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. 4371 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.