ಮಂಗಳೂರು: ಜಿಲ್ಲೆಯಲ್ಲಿ ಶನಿವಾರ ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ.
ಶುಕ್ರವಾರ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಮಧ್ಯಾಹ್ನ ಎರಡು ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಬಸ್ ಸಂಚಾರಕ್ಕೆ ಅವಕಾಶವಿದೆ. ಆಸ್ಪತ್ರೆ ಸೇರಿದಂತೆ ತುರ್ತು ಸೇವೆಗಳನ್ನು ಪಡೆಯಲು ಅನುಮತಿ ನೀಡಲಾಗಿದೆ. ಅನಗತ್ಯ ಸಂಚಾರಕ್ಕೆ ಹಾಗೂ ಅನಗತ್ಯ ಅಂಗಡಿಗಳ ಕಾರ್ಯಾಚರಣೆಗೆ ಅವಕಾಶವಿಲ್ಲ.