News Karnataka Kannada
Thursday, May 02 2024
ಕರಾವಳಿ

ದ.ಕ ಪೊಲೀಸ್ ಕಮಿಷನರ್ ಭೇಟಿ ಮಾಡಿದ ಅಫ್ಘಾನಿಸ್ಥಾನದ ವಿದ್ಯಾರ್ಥಿಗಳು

Karnataka Police
Photo Credit :

 

ಮಂಗಳೂರು: ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಫ್ಘನ್ ವಿದ್ಯಾರ್ಥಿಗಳು ಇಂದು ಮಂಗಳೂರು ಪೊಲೀಸ್ ಕಮಿಷನರ್​ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸಮಸ್ಯೆಗಳನ್ನು ಆಲಿಸಿದ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್., ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ.
ಮಂಗಳೂರಿನಲ್ಲಿ ಒಟ್ಟು 58 ಆಫ್ಘನ್​ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಲ್ಲಿ 11 ವಿದ್ಯಾರ್ಥಿಗಳು ಕಾರ್ಯ ನಿಮಿತ್ತ ಸ್ವದೇಶಕ್ಕೆ ತೆರಳಿದ್ದಾರೆ. ಉಳಿದ 47 ವಿದ್ಯಾರ್ಥಿಗಳು ಇಂದು ಪೊಲೀಸ್ ಕಮಿಷನರ್ ಭೇಟಿ ಮಾಡಿದ್ರು.ದ.ಕ ಪೊಲೀಸ್ ಕಮಿಷನರ್ ಆಫ್ಘಾನ್​​​ ವಿದ್ಯಾರ್ಥಿಗಳ ಅಳಲುಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ವಿವಿಯಯಲ್ಲಿ ಓದುತ್ತಿರುವ ಆಫ್ಘನ್​ ವಿದ್ಯಾರ್ಥಿನಿ ಫರ್ಕುಂದ, ತಾಲಿಬಾನ್​ಗಳು‌ ನಮ್ಮ ದೇಶದವರಲ್ಲ. ಆದರೆ, ಇದೀಗ ಅವರು ಅಫ್ಘಾನಿಸ್ತಾನವನ್ನು ಆಕ್ರಮಿಸಿದ್ದಾರೆ. ಇದರಿಂದ ಭಯಗೊಂಡಿರುವ ಆಫ್ಘನ್ನರು ದೇಶ ತೊರೆಯುತ್ತಿದ್ದಾರೆ. ನನ್ನ ಕುಟುಂಬದವರೂ ಆಫ್ಘನ್​ನಲ್ಲಿಯೇ ಇದ್ದು, ನಾನು ಕರೆ ಮಾಡಿ ವಿಚಾರಿಸುತ್ತಿದ್ದೇನೆ.ಇತ್ತೀಚಿನ ಬೆಳವಣಿಗೆ ಬಳಿಕ ನನ್ನ ತಾಯಿ ಹಾಗೂ ಸಹೋದರಿ ಹೊರಗೆ ಹೋಗುತ್ತಿಲ್ಲ. ತಾಲಿಬಾನಿಗಳಿಂದ ಮಹಿಳೆಯರು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ ಎಂದು ಮನವಿ ಮಾಡಿದರು.
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಮಾತನಾಡಿ, ಅಫ್ಘಾನಿಸ್ತಾನ ವಿದ್ಯಾರ್ಥಿಗಳಿಗೆ ವೀಸಾ ಮುಂದುವರಿಕೆಗೆ ನೆರವು ನೀಡುವ ಭರವಸೆ ನೀಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು