ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಪರಿಗಣಿಸಿ ಬೆಂಗಳೂರು ಬಿಬಿಎಂಪಿ ನೌಕರರು ಮತ್ತು ಅಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಕಳುಹಿಸಿದ ನೀರಿನ ಕ್ಯಾನ್ಗಳು ಧರ್ಮಸ್ಥಳ ಕ್ಷೇತ್ರಕ್ಕೆ ತಲುಪಿದೆ.
ಶ್ರೀಕ್ಷೇತ್ರ ಧಮಸ್ಥಳಕ್ಕೆ ಬಿಬಿಎಂಪಿ ಕೊಡುಗೆಯಾಗಿ ನೀಡಿದ ಕುಡಿಯುವ ನೀರಿನ ಕ್ಯಾನ್ಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಸ್ತಾಂತರಿಸಲಾಯಿತು.
20 ಲೀಟರ್ ನ 300 ಕ್ಯಾನ್, ಹಾಗೂ 10 ಲೀಟರ್ ನ 350 ಕ್ಯಾನ್ ಸೇರಿದಂತೆ ಒಟ್ಟು 10 ಸಾವಿರ ಲೀಟರ್ ಕ್ಷೇತ್ರಕ್ಕೆ ತಲುಪಿದೆ.
ಬೆಂಗಳೂರಿನ ಉದ್ಯಮಿ ಮಹೇಶ್ ಎಂಬುವವರು 7.50 ಸಾವಿರ ಲೀಟರ್ ನೀಡಿದ್ದು, ಉಳಿದಂತೆ ಇನ್ನಷ್ಟು ಮಂದಿ ಭಕ್ತರು ನೀರು ಕಳುಹಿಸಲು ಮುಂದಾಗಿ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡುತ್ತಿದ್ದಾರೆ. ಬುಧವಾರ ಸಂಜೆ ಬೆಂಗಳೂರಿನ ಚಾಲಕ ಸಂಘದಿಂದ 2 ಸಾವಿರ ಮಂದಿ ಸೇರಿ 7 ಸಾವಿರ ಲೀಟರ್ ಕ್ಷೇತ್ರಕ್ಕೆ ಕಳುಹಿಸಿದ್ದಾರೆ. ಈಗಾಗಲೇ ಬಸವನಗುಡಿ ಸುಂಕೇನಹಳ್ಳಿಯ ಭಕ್ತರು 6,780 ಲೀಟರ್ ಹಸ್ತಾಂತರಿದ್ದರು.
ಒಟ್ಟಾರೆಯಾಗಿ ಈವರೆಗೆ 30 ಸಾವಿರ ಲೀಟರ್ ಗೂ ಹೆಚ್ಚು ನೀರಿನ ಕ್ಯಾನ್ ಬಂದು ಸೇರಿದೆ ಎಂದು ಕ್ಷೇತ್ರದಿಂದ ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…