ಬೆಳ್ತಂಗಡಿ: ನಾವೂರು ದ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಒಂದನೇ ತರಗತಿ ಆಂಗ್ಲ ಮಾಧ್ಯಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.
ಬಳಿಕ ಮಾತನಾಡಿ, ಸರಕಾರದಿಂದ ಸಿಗುವ ಸವಲತ್ತನ್ನು ಒದಗಿಸುವಲ್ಲಿ ಶಾಸಕನಾಗಿ ಸಂಪೂರ್ಣ ಸಹಕಾರ ನೀಡುತ್ತೇನೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಯನ್ನು ಖಾಸಗಿ ಶಾಲೆಗೆ ಸರಿಸಾಟಿಯಾಗಿ ಅಭಿವೃದ್ಧಿ ಪಡಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಶಾಲೆಯ ಕಟ್ಟಡ ರಿಪೇರಿಗೆ 3 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ನಡೆಸಲು ಸೂಚಿಸಲಾಗಿದೆ. ಎಂಆರ್ಪಿಎಲ್ ಸಿಎಸ್ಆರ್ ಅನುದಾನದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಜಿ.ಪಂ. ಸದಸ್ಯೆ ಸೌಮ್ಯಲತಾ ಜಯಂತ ಗೌಡ ಮಾತನಾಡಿ, ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರಯುತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಕ್ಕಳು ಸವಲತ್ತನ್ನು ಸದುಪಯೋಗಿಸುವಂತೆ ಸಲಹೆ ನೀಡಿದರು.
ಮಾಜಿ ಸೈನಿಕರಾದ ವಿಠಲ್ ಕ್ರಾಸ್ತಾ ನೀಡಿದ ಪೆÇ್ರೀತ್ಸಾಹ ಧನವನ್ನು 7ನೇ ತರಗತಿಯ ಪವಿತ್ರಾ ಹಾಗೂ 5ನೇ ತರಗತಿಯ ಕೌಶಿಕ್ಗೆ, ಜೋಸೆಫ್ ಮೈಕಲ್ ಡಿಸೋಜ ನೀಡಿದ ಪಠ್ಯ ಪರಿಕರವನ್ನು 8ನೇ ತರಗತಿಯ ವಿಘ್ನೇಶ್ಗೆ ಶಾಸಕರು ಹಸ್ತಾಂತರಿಸಿದರು. ನಾವೂರು ಯುವಕ ಮಂಡಲ ವತಿಯಿಂದ ಒಂದನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಸೇರ್ಪಡೆಗೊಂಡ 30 ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು.
ನಾವೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾ„ಕಾರಿ ಸತೀಶ್ ಪಿ., ಶಿಕ್ಷಣ ಸಂಯೋಜಕ ಸುಭಾಷ್ ಜಾದವ್, ಕ್ಷೇತ್ರ ಸಮನ್ವಯಾ„ಕಾರಿ ಗಣೇಶ್ ಐತಾಳ್, ತಾ.ಪಂ. ಉಪಾಧ್ಯಕ್ಷೆ ವೇದಾವತಿ, ನಾವೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಗೌಡ, ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ರಮೇಶ್ ಪೈಲಾರ್, ಸದಸ್ಯರಾದ ಹಸೈನಾರ್, ಶೋಭಾ, ಡೀಕಮ್ಮ, ಹರೀಶ್ ಸಾಲ್ಯಾನ್ ಮತ್ತಿತರರಿದ್ದರು.
ಮುಖ್ಯೋಪಾಧ್ಯಾಯ ಪುಟ್ಟಣ್ಣ ಸ್ವಾಗತಿಸಿದರು. ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶುಭಾ ವಂದಿಸಿದರು.
ಫೆÇೀಟೋ: ನಾವೂರು ದ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ತರಗತಿ ಕೊಠಡಿಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.
ಫೆÇೀಟೋ: ನಾವೂರು ದ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡಲಾಯಿತು.