Categories: ಕರಾವಳಿ

ನಿಲ್ಲಿಸಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ : ನಾಲ್ವರು ವಿದ್ಯಾರ್ಥಿಗಳು ಸಾವು

ಕಾಸರಗೋಡು: ನಿಲುಗಡೆಗೊಳಿಸಿದ್ದ ಕಾರಿನ ಮೇಲೆ ಲಾರಿ ಬಿದ್ದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, ಐವರು ಗಾಯಗೊಂಡ ದಾರುಣ ಘಟನೆ ಇಂದು ಬೆಳಿಗ್ಗೆ ಕಣ್ಣೂರು ಇರಿಟ್ಟಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ವಡಗರ ತಿಕ್ಕೊಡಿಯ ಆಶಿಕ್ (19), ಮಿನಾಸ್ (19) , ಯಾಸಿನ್ (18) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ವಡಗರ ಎಂ.ಎಚ್.ಇ.ಎಸ್ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿದ್ದಾರೆ. ಇರಿಟ್ಟಿ ಮಾಕೂಡ್  ಚೆಕ್ ಪೋಸ್ಟ್ ಸಮೀಪ ನಿಲುಗಡೆಗೊಳಿಸಿದ್ದ ಟವೇರಾ ಕಾರಿನ ಮೇಲೆ ಮಂಗಳೂರು ಕಡೆಯಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಮಗುಚಿ ಬಿದ್ದು ಈ ದುರ್ಘಟನೆ ನಡೆದಿದೆ.

ಕಾರಲ್ಲಿದ್ದವರು ಪ್ರವಾಸಕ್ಕೆ ತೆರಳಿ ಮರಳುತ್ತಿದ್ದರು. ಅಪಘಾತದಿಂದ ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಅಗ್ನಿಶಾಮಕ ದಳ, ಪೊಲೀಸ್ ಮತ್ತು ಸ್ಥಳೀಯರು ಹರಸಾಹಸ ಪಡಬೇಕಾಯಿತು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಇರಿಟ್ಟಿ ಪೊಲೀಸರು ದಾಖಲಿಸಿಕೊಂಡಿದ್ದಾರೆ

Desk

Recent Posts

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

3 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

9 mins ago

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

22 mins ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

23 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

36 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

43 mins ago