ಬಂಟ್ವಾಳ: ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸಭೆ ನಡೆಸಿರುವ ಸಚಿವ ಬಿ. ರಮಾನಾಥ ರೈ ಅವರ ವಿರುದ್ಧ ದೂರು ದಾಖಲಾಗಿದೆ.
ಅನುಮತಿ ಪಡೆಯದೆ ಪಾಣಿಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸಭೆ ನಡೆಸಲಾಗಿತ್ತು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಚುನಾವಣಾ ಅಧಿಕಾರಿ ಡಾ.ಎಂ. ಆರ್. ರವಿ ಅವರ ಸೂಚನೆಯಂತೆ ಚುನಾವಣಾ ಅಧಿಕಾರಿಗಳು ವೀಡಿಯೋ ಚಿತ್ರೀಕರಣ ಮತ್ತು ಇತರ ದಾಖಲೆ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.