Categories: ಕರಾವಳಿ

ನ.5ರಂದು ಸುಳ್ಯ ನ.ಪಂ. ಅಧ್ಯಕ್ಷತೆ, ಉಪಾಧ್ಯಕ್ಷತೆ ಚುನಾವಣೆ

ಸುಳ್ಯ: ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷತೆ ಆಯ್ಕೆಗೆ ನ.5ರಂದು ಚುನಾವಣೆ ನಡೆಯಲಿದೆ. ಚುನಾವಣೆ ನಡೆದು ಒಂದೂವರೆ ವರ್ಷದ ಬಳಿಕ ಇದೀಗ ಅಧ್ಯಕ್ಷ ಉಪಾಧ್ಯಕ್ಷತೆ ಆಯ್ಕೆಗೆ ಮುಹೂರ್ತ ಫಿಕ್ಸ್ ಆಗಿದೆ.

ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಗೊಂಡಿದ್ದು ಅಧ್ಯಕ್ಷತೆ ಸಾಮಾನ್ಯ ವಿಭಾಗಕ್ಕೆ ಮತ್ತು ಉಪಾಧ್ಯಕ್ಷತೆ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಸುಳ್ಯ ನಗರ ಪಂಚಾಯಿತಿಯ 20 ವಾರ್ಡ್‍ಗಳ ಪೈಕಿ 14 ಸ್ಥಾನ ಪಡೆದು ಸತತ ನಾಲ್ಕನೇ ಬಾರಿ ಅಧಿಕಾರ ವಹಿಸಿ ಕೊಂಡಿರುವ ಬಿಜೆಪಿ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಅಲಂಕರಿಸಲಿದ್ದಾರೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ವಿಭಾಗಕ್ಕೆ ಮೀಸಲಿರುವ ಕಾರಣ ಬಿಜೆಪಿಯಿಂದ ಆಯ್ಕೆಯಾದ 14 ಮಂದಿಯೂ ಅರ್ಹರೇ. ಆದರೆ ಉಪಾಧ್ಯಕ್ಷತೆ ಸಾಮಾನ್ಯ ಮಹಿಳಾ ಮೀಸಲು ಇರುವ ಕಾರಣ ಅಧ್ಯಕ್ಷತೆಯನ್ನು ಪುರುಷ ಅಭ್ಯರ್ಥಿಗೆ ನೀಡುವುದು ಖಚಿತ. ಬಿಜೆಪಿಯಿಂದ ಆಯ್ಕೆಯಾದ 5 ಮಂದಿ ಪರುಷ ಅಭ್ಯರ್ಥಿಗಳಲ್ಲಿ ಒಬ್ಬರು ಅಧ್ಯಕ್ಷರಾಗಲಿದ್ದಾರೆ. ಇವರಲ್ಲಿ ಮಾಜಿ ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರ ಹೆಸರು ಮುಂಚೂಣಿಯಲ್ಲಿದೆ. ಪಕ್ಷ ಅಧಿಕೃತವಾಗಿ ಘೋಷಣೆ ಮಾಡದೇ ಇದ್ದರೂ ವಿನಯಕುಮಾರ್ ಕಂದಡ್ಕರಿಗೆ ಅಧ್ಯಕ್ಷತೆ ಒಲಿಯುವ ಸಾಧ್ಯತೆ ಹೆಚ್ಚು ಎಂದು ವಿಶ್ಲೇಷಿಸಲಾಗುತ್ತದೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವಿಭಾಗಕ್ಕೆ ಮೀಸಲಿರುವ ಕಾರಣ ಬಿಜೆಪಿಯಿಂದ ಆಯ್ಕೆಯಾದ ಒಂಭತ್ತು ಮಂದಿ ಮಹಿಳಾ ಸದಸ್ಯರು ಅರ್ಹರೇ. ಇವರಲ್ಲಿ ಎರಡನೇ ಬಾರಿ ಆಯ್ಕೆಯಾಗಿರುವ ಸರೋಜಿನಿ ಪೆಲ್ತಡ್ಕ, ಕಳೆದ ಬಾರಿ ನಾಮನಿರ್ದೇಶಿತ ಸದಸ್ಯೆಯಾಗಿದ್ದು ಈ ಬಾರಿ ಸದಸ್ಯೆಯಾಗಿ ಆಯ್ಕೆಯಾಗಿರುವ ಶಶಿಕಲಾ ಹಿರಿಯ ಸದಸ್ಯರು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಕುರಿತು ನಿರ್ಧಾರ ಕೈಗೊಂಡಿಲ್ಲ. ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. 2019 ಮೇನಲ್ಲಿ ನಡೆದ ಚುನಾವಣೆಯಲ್ಲಿ ಸುಳ್ಯ ನಗರ ಪಂಚಾಯಿತಿಯ 20 ಸ್ಥಾನಗಳ ಪೈಕಿ 14 ಬಿಜೆಪಿ 4 ಕಾಂಗ್ರೆಸ್ ಮತ್ತು ಇಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ.

Desk

Recent Posts

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

24 mins ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

38 mins ago

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

55 mins ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

1 hour ago

ಫೇಸ್ ಬುಕ್​ನ ಜಾಹೀರಾತಿನ ಜಾಲಕ್ಕೆ ಬಿದ್ದು 2 ಲಕ್ಷ ಕಳ್ಕೊಂಡ ಮಹಿಳೆ

ಫೇಸ್ ಬುಕ್​ನ ಒಂದು ಜಾಹಿರಾತಿಗೆ ಮರುಳಾದ ಮಹಿಳೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ ಹಣ ಕಳೆದುಕೊಂಡಿದ್ದಾರೆ. ಫೇಸ್…

1 hour ago

ತಂದೆ ಮದ್ಯಪಾನ ಮಾಡಿ ತಾಯಿಗೆ ಥಳಿತ: ನೊಂದು ಮಗಳು ಆತ್ಮಹತ್ಯೆ

ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ಬೇಸರಗೊಂಡು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

1 hour ago