News Karnataka Kannada
Monday, May 20 2024
ಕರಾವಳಿ

ಪಂಜ ದೇವಸ್ಥಾನದ ಮೆಟ್ಟಿಲಿನಿಂದ ಕುಸಿದು ಬಿದ್ದ ವ್ಯಕ್ತಿ ಸಾವು

Photo Credit :

ಪಂಜ ದೇವಸ್ಥಾನದ ಮೆಟ್ಟಿಲಿನಿಂದ  ಕುಸಿದು ಬಿದ್ದ ವ್ಯಕ್ತಿ ಸಾವು

ಪುತ್ತೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆಂದು ತೆರಳಿದ ಬಲ್ನಾಡಿನ ವ್ಯಕ್ತಿಯೋರ್ವರು ದೇವಳದ ಮೆಟ್ಟಿಲುಗಳಿಂದ ಕುಸಿದು ಬಿದ್ದು ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟ ಘಟನೆ ವರದಿಯಾಗಿದೆ.

ಬಲ್ನಾಡು ಗ್ರಾಮದ ಪಂಜಳ ದುಗ್ಗಣ್ಣ ಗೌಡ ಎಂಬವರ ಪುತ್ರ ಹರೀಶ್(36ವ)ರವರು ಮೃತಪಟ್ಟವರು. ಹರೀಶ್‍ರವರು ಕಡಬ ತಾಲೂಕಿನ ಪಂಜದ ಮನೆಯೊಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತಿದ್ದು, ಫೆ. 6ರಂದು ಪಂಜ ದೇವಸ್ಥಾನದಲ್ಲಿ ನಡೆದ ಜಾತ್ರೋತ್ಸವಕ್ಕೆಂದು ರಾತ್ರಿ ತೆರಳಿದ್ದ ವೇಳೆ ದೇವಳದ ಮೆಟ್ಟಲಿನಿಂದ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದರು.

ಅವರನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ದಾರಿ ಮಧ್ಯೆ ಮೃತ ಪಟ್ಟಿದ್ದಾರೆನ್ನಲಾಗಿದೆ. ಬಳಿಕ ಮೃತ ದೇಹವನ್ನು ಮಂಗಳೂರು ವೆನ್‍ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತ ಸಂಬಂಧಿಕರಿಗೆ ಬಿಟ್ಟು ಕೊಡಲಾಗಿದೆ. ಘಟನೆಗೆ ಸಂಬಂಧಿಸಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಮೃತರು ಪತ್ನಿ ಪೂರ್ಣಿಮಾ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

188

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು