ಮಂಗಳೂರು: ಇಲ್ಲಿನ ವಿಮಾನ ನಿಲ್ದಾಣದ ರನ್ವೇ ವಿಸ್ತರಣೆ ವೇಳೆ ಭೂ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡದ ಹಿನ್ನೆಲೆಯಲ್ಲಿ ಮಂಗಳೂರಿನ ಸಿವಿಲ್ ಪ್ರಿನ್ಸಿಪಲ್ ಡಿವಿಷನ್ ಕೋರ್ಟ್ ಸಹಾಯಕ ಆಯುಕ್ತರ ಕಚೇರಿ ಜಪ್ತಿಗೆ ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಇವತ್ತು ಬೆಳ್ಳಂಬೆಳಗ್ಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಆಮೀನರು, ಎಸಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್ ಮತ್ತು ಸಹಾಯಕ ಆಯುಕ್ತರ ಸ್ಕಾರ್ಪಿಯೋ ಕಾರನ್ನು ಜಪ್ತಿ ಮಾಡಿದ್ದಾರೆ.