ಮಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ಮಂಗಳೂರು ನಗರದ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಜು.19ರ ಸೋಮವಾರ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಡಿಡಿಪಿಐ ಮಲ್ಲೆ ಸ್ವಾಮಿ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತರಬೇಕು, ಕೇರಳದಿಂದ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿರುವುದನ್ನು ಖಾತ್ರಿ ಪಡಿಸಿಕೊಂಡರು.
ಈ ಸಂದರ್ಭದಲ್ಲಿ ಸಂಬಂಧಿಸಿದ ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.