ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಭಾನುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭಗೊಂಡಿದೆ.
ಪಿ.ಜಿ.ಜಗನ್ನಿವಾಸ್ ರಾವ್ ಮತ್ತು ಸಹೋದರ ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಮತ್ತು ವಸಂತ ಕೆದಿಲಾಯರವರು, ಅರ್ಚಕ ಪ್ರೀತಂ ಪುತ್ತೂರಾಯ ವೈದಿಕ ಕಾರ್ಯಕ್ರಮ ನೆರವೇರಿಸಿದರು.
ಶಾಸಕರೂ, ಮುಖ್ಯ ಮಂತ್ರಿಗಳ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿಯಾದ ಶಕುಂತಳಾ ಟಿ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜಯಂತಿ ಬಲ್ನಾಡು, ಉಪಾಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ಸದಸ್ಯ ರಾಜೇಶ್ ಬನ್ನೂರು, ದೇವಳದ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಸದಸ್ಯರಾದ ವಿಶ್ವ ಪುಂಡಿತ್ತೂರು, ಡಾ. ಸುಧಾ ಎಸ್.ರಾವ್, ಪ್ರಭಾ ಆಚಾರ್ಯ, ಆಡಳಿತಾಧಿಕಾರಿ ಜಗದೀಶ್.ಎಸ್, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಮತ್ತಿತರ ಸಾವಿರಾರು ಭಕ್ತರು ಉಪಸ್ಥಿತರಿದ್ದರು.