News Karnataka Kannada
Sunday, April 28 2024
ಕರಾವಳಿ

ಪೊಲೀಸರಿಂದ ಶಿರೂರು ಮೂಲ ಮಠದ ಅಡುಗೆಯವನ ವಿಚಾರಣೆ

Photo Credit :

ಪೊಲೀಸರಿಂದ ಶಿರೂರು ಮೂಲ ಮಠದ ಅಡುಗೆಯವನ ವಿಚಾರಣೆ

ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವಿನ ಹಿನ್ನೆಲೆಯಲ್ಲಿ ಶಿರೂರು ಮೂಲ ಮಠದಲ್ಲಿ ಪೊಲೀಸರು ಅಡುಗೆಯವರನ್ನು ಹಾಗೂ ಅಲ್ಲಿನ ಕೆಲಸದವರ ಸಹಿತ ಹಲವಾರು ಮಂದಿಯನ್ನು ವಿಚಾರಣೆ ನಡೆಸಿದ್ದಾರೆ.

ಶಿರೂರು ಶ್ರೀಗಳು ಸೇವಿಸಿದ್ದ ಆಹಾರದಲ್ಲಿ ವಿಷದ ಅಂಶ ಇರುವುದು ಪತ್ತೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಅವಿನಾಶ್ ಶೆಟ್ಟಿ ಅವರು ಹೇಳಿದ್ದರು.

ಶಿರೂರು ಶ್ರೀಗಳದ್ದು ಅಸಹಜ ಸಾವು ಎನ್ನುವ ಬಗ್ಗೆ ದೂರು ಕೂಡ ದಾಖಲಾಗಿತ್ತು. ಇದೆಲ್ಲದರ ಹಿನ್ನೆಲೆಯಲ್ಲಿ ಪೊಲೀಸರು ಮೂಲ ಶಿರೂರು ಮಠವನ್ನು ವಶಕ್ಕೆ ಪಡೆದುಕೊಂಡಿದ್ದರು. ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ವಿಶ್ವವಲ್ಲಭ ತೀರ್ಥರು ಹಾಗೂ ಅದಮಾರು ಮಠದ ಕಿರಿಯ ಯತಿ ಈಶಪ್ರಿಯ ಸ್ವಾಮೀಜಿ ಅವರಿಂದ ಪೊಲೀಸರು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು