News Karnataka Kannada
Monday, April 29 2024
ಕರಾವಳಿ

ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ: ಪ್ರಚಾರದಲ್ಲಿ ಭಾಗಿ

Photo Credit :

ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ: ಪ್ರಚಾರದಲ್ಲಿ ಭಾಗಿ

ಮಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎಪ್ರಿಲ್ 27, ಶುಕ್ರವಾರದಂದು ಬಂಟ್ವಾಳಕ್ಕೆ ಆಗಮಿಸಲಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ಏರ್ಪಡಿಸಿ ಮಾತನಾಡಿದ ಅವರು ಎಪ್ರಿಲ್ 27 ರಂದು ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು ಬಿ.ಸಿ.ರೋಡ್ ಸಮೀಪದ ಜೋಡುಮಾರ್ಗ ಉದ್ಯಾನವನದಲ್ಲಿ ನಡೆಯುವ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲೂ, ಕಾಂಗ್ರೆಸ್ ಪಕ್ಷ ವಿಜಯ ಪತಾಕೆ ಹಾರಿಸಲಿದ್ದು, ಪಕ್ಷವು ಎಲ್ಲಾ ರೀತಿಯಲ್ಲಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧವಾಗಿದೆ. ಬಿಜೆಪಿ ಪಕ್ಷದಲ್ಲಿ ಈಗಾಗಲೇ ಭಿನ್ನಮತ ಹೊಗಯಾಡುತ್ತಿದ್ದು, ಬಿಜೆಪಿ ಒಡೆದು ಹೋದ ಮನೆ ಅಂತ ಇಡೀ ರಾಜ್ಯದ ಜನತೆಗೆ ತಿಳಿದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅನ್ನೋದನ್ನು ಈ ವೇಳೆ ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
189

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು