ಬಡಗಬೆಳ್ಳೂರು ಶಾಲೆಗೆ ರೋಟರಿ ಕ್ಲಬ್‌ ವತಿಯಿಂದ ಪೀಠೋಪಕರಣಗಳ ಕೊಡುಗೆ

ಮಂಗಳೂರು ; ಇಲ್ಲಿಗೆ ಸಮೀಪದ ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ
ನಿರ್ಮಿಸಿರುವ ಮೂರು ತರಗತಿ ಕೋಣೆಗಳ ಪೈಕಿ ಒಂದು ತರಗತಿ ಕೋಣೆಗೆ ಶಾಲಾ ಸಂಚಾಲಕರ ಕೋರಿಕೆಯ ಮೇರೆಗೆ ಬಂಟ್ವಾಳ ರೋಟರಿ ಕ್ಲಬ್‌    ಪೀಠೋಪಕರಣ ಗಳನ್ನು ಕೊಡುಗೆಯಾಗಿ ನೀಡಿದೆ.   ಕ್ಲಬ್‌ ಅದ್ಯಕ್ಷರಾದ  ಕೆ. ನಾರಾಯಣ. ಹೆಗ್ಡೆ ಇವರ ಮುಂದಾಳತ್ವದಲ್ಲಿ ರೂ. 1,30,000/- ವೆಚ್ಚದಲ್ಲಿ ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ತಯಾರಿಸಿ ಕೊಟ್ಟ ಡೆಸ್ಕ್, ಬೆಂಚ್, ಟೇಬಲ್ ಚೆಯರ್ ಇತ್ಯಾದಿಗಳನ್ನು ಶಾಲೆಗೆ ಹಸ್ತಾಂತರಿಸುವ ಕಾರ್ಯಕ್ರಮವು ದಿನಾಂಕ: 30-06-2021ನೇ ಬುಧವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಬಡಗಬೆಳ್ಳೂರು ಶಾಲೆಯಲ್ಲಿ ನಡೆಯಿತು, ಈ ಕಾರ್ಯಕ್ರಮದಲ್ಲಿ ಬಂಟ್ವಾಳ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ನಿಯೋಜಿತ ಜಿಲ್ಲಾ ಗವರ್ನರ್‌ರಾದ ಪ್ರಕಾಶ್ ಕಾರಂತ್  ನರಿಕೊಂಬು, ರೋಟರಿ ಕ್ಲಬ್ ಬಂಟ್ವಾಳ ಇದರ ಕಾರ್ಯದರ್ಶಿಯಾದ ವಾಣಿ ಪ್ರಕಾಶ್ ಕಾರಂತ್, ಶಾಲಾ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಪ. ರಮೇಶ್ವಂದ್ರ ಭಂಡಾರಿ, ಶಾಲಾ ಸಂಚಾಲಕರಾದ ಕೆ. ನರೇಂದ್ರನಾಥ್ ಭಂಡಾರಿ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಕೇಶವ ನಾಯ್ಕ್ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ಕೆ. ನರೇಂದ್ರನಾಥ್ ಭಂಡಾರಿಯವರು ಕಾರ್ಯಕ್ರಮದ ವಿಷಯ ಪ್ರಸ್ತಾಪಿಸಿ ಅತಿಥಿಗಳಿಗೆ ಸ್ವಾಗತ ಕೋರಿದರು. ಶ್ರೀ ಪ್ರಕಾಶ್ ಕಾರಂತ್‌ರವರು ದೀಪ ಪ್ರಜ್ವಲನ ಮಾಡುವ ಮೂಲಕ ಕಾರ್ಯಕ್ರಮವನ್ನು ಉಧ್ಭಾಟಿಸಿ ಬಂಟ್ವಾಳ ರೋಟರಿ ಕ್ಲಬ್ ವತಿಯಿಂದ ಶಾಲೆಗೆ ಕೊಡಮಾಡಿದ ಪೀಠೋಪಕರಣಗಳನ್ನು ಹಸ್ತಾಂತರಿಸಿ ರೋಟರಿ ಸಂಸ್ಥೆಯ ದ್ಯೇಯೋದ್ದೇಶಗಳ ಬಗ್ಗೆ ಪ್ರಸ್ತಾಪಿಸಿದ್ದಲ್ಲದೇ ಶಾಲೆಯ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿ ಇನ್ನು ಮುಂದಕ್ಕೂ ರೋಟರಿ ವತಿಯಿಂದ ಶಾಲೆಗೆ ಅಗತ್ಯ ಸಹಕಾರವನ್ನು. ನೀಡುವ ಭರವಸೆಯನ್ನು ನೀಡಿದರು.

ಶಾಲೆಯ ನಿವೃತ್ತ  ಮುಖ್ಯೋಪಾಧ್ಯಾಯರಾದ ಸಂಕಪ್ಪ ಶೆಟ್ಟಿಯವರು ಸಾಂದರ್ಭಿಕವಾಗಿ ಮಾತನಾಡಿ ಶಾಲೆಯ ಬೆಳವಣಿಗೆಗಳ ಬಗ್ಗೆ ಬೆಳಕು ಚೆಲ್ಲಿದರು. ಶಾಲೆಯ ವತಿಯಿಂದ ರೋಟರಿ ಕ್ಲಬ್‌ಗೆ ಸ್ಮರಣಿಕೆ ನೀಡಿ ಗೌರವಾರ್ಪಣೆ, ಧನ್ಯವಾದ ಸಲ್ಲಿಸಲಾಯಿತು. ಮುಖ್ಯೋಪಾಧ್ಯಾಯರಾದ ಕೇಶವ ನಾಯ್ಕ್ರವರು ಧನ್ಯವಾದ ಸಮರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ನಿವೃತ್ತ ಶಿಕ್ಷಕರಾದ ಗಂಗಾಧರ್ ರೈ, ಸಂಕಪ್ಪ ಶೆಟ್ಟಿ, ಕಟ್ಟಡ ಸಮಿತಿಯ ಉಪಾಧ್ಯಕ್ಷರಾದ ದಯಾನಂದ ಮೂಡುಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಚೀಂದ್ರನಾಥ ರೈ, ಶಾಲಾ ಮೇಲುಸ್ತುವಾರಿ ಸಮಿತಿ/ಎಸ್.ಡಿ.ಎಮ್.ಸಿ.ಯ ಅಧ್ಯಕ್ಷರಾದ ಶ್ರೀಮತಿ ಗುಣವತಿ, ಶಾಲಾ ಗೌರವ ಶಿಕ್ಷಕಿಯರು, ಹಳೆ ವಿದ್ಯಾರ್ಥಿಗಳು, ಊರ ವಿದ್ಯಾಭಿಮಾನಿ ಬಂಧುಗಳು ಹಾಜರಿದ್ದರು.

Indresh KC

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago