ಮಂಗಳೂರು: ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆ್ಯಕ್ಟಿವಾದಲ್ಲಿದ್ದ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಕೊಕ್ಕರಕಲ್ ಪೆಟ್ರೋಲ್ ಪಂಪ್ ಬಳಿ ಘಟನೆ ನಡೆದಿದ್ದು, ಕಾರ್ನಾಡು ವಿಷ್ಣುಮೂರ್ತಿ ದೇವಸ್ಥಾನ ಸಮೀಪದ ನಿವಾಸಿ ಮಧುಸೂದನ್ ಕಾಮತ್(61) ಸಾವನ್ನಪ್ಪಿದ್ದಾರೆ.
ಮಧುಸೂದನ್ ಅವರು ಪೆಟ್ರೋಲ್ ತುಂಬಿಸಿಕೊಂಡು ರಾ.ಹೆ.ಯಲ್ಲಿ ಬಲಕ್ಕೆ ತಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಮೃತರು ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಉದ್ಯೋಗಿಯಾಗಿದ್ದರು. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.