ಬೆಂಗಳೂರು, – ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮಗೆ ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸವನ್ನು ಮಾಜಿ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ಯಾವ ರೀತಿ ತೀರ್ಮಾನ ಮಾಡುತ್ತಾರೆ.
ಅದರ ಮೇಲೆ ನಮ್ಮ ಸಚಿವ ಸ್ಥಾನ ನಿರ್ಧಾರವಾಗಲಿದೆ ಎಂದರು. ನಾವು ಭಾರತೀಯ ಜನತಾಪಕ್ಷ ಮತ್ತು ಯಡಿಯೂರಪ್ಪ ಅವರನ್ನು ನಂಬಿಕೊಂಡು ಬಂದವರು. ನಮಗೆ ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆಯೇ ಹೊರತು ಪಕ್ಷ ಬದಲಾಗಿಲ್ಲ. ಈಗಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಹೊಸ ಮುಖ್ಯಮಂತ್ರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿಯೇ ಆಯ್ಕೆಯಾಗಿದ್ದಾರೆ. ನಾವು ಮಂತ್ರಿಯಾಗಿ ಮುಂದುವರೆಯುತ್ತೇವೆಯೋ ಇಲ್ಲವೋ ಎಂದು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ನಿರ್ಧರಿಸಿಸುತ್ತಾರೆ. ನಾವು ಸಚಿವ ಸ್ಥಾನಕ್ಕಾಗಿ ಯಾರ ಮೇಲೂ ಒತ್ತಡ ತರುವುದಿಲ್ಲ. ಕೇಂದ್ರದ ಹೈಕಮಾಂಡ್ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಬಿಜೆಪಿ ಅನ್ಯಾಯ ಮಾಡಲ್ಲ, ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಶಿವರಾಮ ಹೆಬ್ಬಾರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.