News Karnataka Kannada
Sunday, May 05 2024
ಕರಾವಳಿ

ಬಿಜೆಪಿ ಪರ ಜನತೆಯ ವಿಶ್ವಾಸ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಸಂತಸ

Nalin Kumar
Photo Credit :

 

ಮಂಗಳೂರು : ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಸಾಬೀತು ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಮೇಲೆ ವಿಶ್ವಾಸ ಇರಿಸಿದ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿತ್ತು. ಈ ಬಾರಿ ಮಸ್ಕಿ ಕ್ಷೇತ್ರದಲ್ಲಿ ಮಾತ್ರ ಪಕ್ಷಕ್ಕೆ ಹಿನ್ನಡೆಯಾಗಿದೆ. ಬೆಳಗಾವಿ ಮತ್ತು ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಮಹತ್ವದ ಗೆಲುವು ದಾಖಲಿಸಿದೆ. ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳಿಗೆ ಉಪ ಚುನಾವಣೆಯಲ್ಲಿ ಮತದಾರರು ಮನ್ನಣೆ ನೀಡಿದ್ದು ಬಿಜೆಪಿ ಗೆಲುವಿಗೆ ಪೂರಕವಾಗಿದೆ. ಈ ಫಲಿತಾಂಶದಿಂದ ರಾಜ್ಯದಲ್ಲಿ ಬಿಜೆಪಿಯ ಸಂಘಟನೆ ಇನ್ನಷ್ಟು ಬಲವರ್ಧನೆಯಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಾಂಗ್ರೆಸ್ ಪಕ್ಷವನ್ನು 5 ರಾಜ್ಯಗಳಲ್ಲೂ ಜನತೆ ತಿರಸ್ಕರಿಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ನಳಿನ್‍ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು