ಮಂಗಳೂರು ;ದಿನಾಂಕ: 18-08-2021ರಂದು ಬೀದಿ ಬದಿ ವ್ಯಾಪಾರಕ್ಕೆ ಸಂಬಂಧಿಸಿದ, ಪಟ್ಟಣ ವ್ಯಾಪಾರ ಸಮಿತಿ ಸಭೆಯು ಮಂಗಳೂರು ಮಹಾನಗರಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಅಕ್ಷಯ ಶ್ರೀಧರ್ ಆಯುಕ್ತರು ಮಂಗಳೂರು ಮಹಾನಗರಪಾಲಿಕೆ, ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಅಜಿತ್ ಎಂ ಉಪ ಆಯುಕ್ತರು ಮಂಗಳೂರು ಮಹಾನಗರಪಾಲಿಕೆ ಹಾಗೂ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು.
– ಈಗಾಗಲೇ ಪಟ್ಟಣ ವ್ಯಾಪಾರ ಸಮಿತಿಯಲ್ಲಿ ಅನುಮೋದನೆಗೊಂಡು ಗುರುತಿನ ಚೀಟಿ ಮತ್ತು ಬೀದಿ ವ್ಯಾಪಾರದ ಪ್ರಮಾಣ ಪತ್ರ ಹೊಂದಿರುವ ಬೀದಿ ಬದಿ ವ್ಯಾಪಾರಸ್ಥರು (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರಿಗಳ ನಿಯಂತ್ರಣ) ಅಧಿನಿಯಮ 2021ರ ಅನ್ವಯ ಬೀದಿ ಬದಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳುವುದು.- ಬೀದಿ ಬದಿ ವ್ಯಾಪಾರಸ್ಥರನ್ನು ಬೀದಿ ಬದಿ ವ್ಯಾಪಾರದ ಚಟುವಟಿಕೆಗಳ ಆಧಾರದ ಮೇಲೆ ವರ್ಗೀಕರಣ ಮಾಡಿ ಕ್ರಮಕೈಗೊಳ್ಳುವ ಉದ್ದೇಶದಿಂದ ಮಂಗಳೂರು ಮಹಾನಗರಪಾಲಿಕೆ ವತಿಯಿಂದ 10 ಸಮೀಕ್ಷಾ ತಂಡಗಳನ್ನು ರಚನೆ ಮಾಡಿ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರಿಗಳ ವಿನಿಯಂತ್ರಣ ಮತ್ತು ಪರವಾನಿಗೆ) ಯೋಜನೆ 2020ರಲ್ಲಿ ತಿಳಿಸಿರುವಂತೆ ಮಂಗಳೂರು ಮಹಾನಗರಪಾಲಿಕಾ ವ್ಯಾಪ್ತಿಯೊಳಗಡೆ ಹೊಸದಾಗಿ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು.- ಸಮೀಕ್ಷೆಯ ವಿವರಗಳನ್ನು ಪಟ್ಟಣ ವ್ಯಾಪಾರ ಸಮಿತಿಯಿಂದ ಪರಿಶೀಲಿಸಿ ಆರ್ಹ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತು ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರವನ್ನು ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು- ಬೀದಿ ಬದಿ ವ್ಯಾಪಾರದ ಗುರುತು ಚೀಟಿ ಮತ್ತು ಪ್ರಮಾಣ ಪತ್ರವನ್ನು ಹೊಂದಿರುವವರಿಗೆ ಬೀದಿ ಬದಿ ವ್ಯಾಪಾರದ ವಲಯವನ್ನು ಗುರುತಿಸಿ ವ್ಯಾಪಾರ ಚಟುವಟಿಕೆಗಳನ್ನು ಮಾಡಲು ಅವಕಾಶ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಬೀದಿ ಬದಿ ವ್ಯಾಪಾರದ ವಲಯಗಳನ್ನು ಗುರುತಿಸಿದ್ದು, ವಲಯ ರಚಿಸಿ ಘೋಷಣೆ ಮಾಡುವ ಸಲುವಾಗಿ ಪ್ರಸ್ತಾವನೆ ತಯಾರಿಸುವ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.
– ಕಾನೂನು ಮೀರಿ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುವವರಿಗೆ ಮಂಗಳೂರು ಮಹಾನಗರಪಾಲಿಕೆಯಿಂದ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನಿರ್ದಾಕ್ಷಣ್ಯವಾಗಿ ಕ್ರಮವನ್ನು ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೆಯೋಭಿವೃದ್ಧಿ (ರಿ) ಮಂಗಳೂರು ಇವರ ಸಹಕಾರ ಅವಶ್ಯವೆಂದು ತಿಳಿಸಿದರು.