ಮಂಗಳೂರು: ಕೋವಿಡ್–19 ಸಂಕಷ್ಟ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸಿದ ಬೆಳ್ತಂಗಡಿ ತಾಲ್ಲೂಕಿನ 250 ಆಶಾ ಕಾರ್ಯಕರ್ತೆಯರಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮೊಬೈಲ್ ಫೋನ್ಗಳನ್ನು ಶನಿವಾರ ಉಜಿರೆಯಲ್ಲಿ ವಿತರಿಸಿದರು.
ಶಾಸಕ ಹರೀಶ್ ಪೂಂಜ ನೇತೃತ್ವದ ‘ಶ್ರಮಿಕ ಸೇವಾ ಟ್ರಸ್ಟ್’ ವತಿಯಿಂದ ಒಟ್ಟು ₹ 25 ಲಕ್ಷ ಮೌಲ್ಯದ ಮೊಬೈಲ್ ಫೋನ್ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ವೈಯಕ್ತಿಕ ನೆಲೆಯಲ್ಲಿ ಮೊಬೈಲ್ ಫೋನ್ ನೀಡುವುದಾಗಿ ಶಾಸಕ ಹರೀಶ್ ಪೂಂಜ ಭರವಸೆ ನೀಡಿದ್ದರು. ಅದರಂತೆ ಈಗ ಈಡೇರಿಸಿದ್ದಾರೆ. ಇದಕ್ಕೆ ಉಜಿರೆಯ ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ ರಾಜೇಶ್ ಪೈ, ಲಕ್ಷ್ಮಿ ಗ್ರೂಪ್ ಮಾಲೀಕ ಮೋಹನ್ ಕುಮಾರ್ ಹಾಗೂ ಸದಸ್ಯರು ಸಹಕಾರ ನೀಡಿದ್ದಾರೆ.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮೊಬೈಲ್ ಫೋನ್ ವಿತರಿಸಿ, ‘ಇದು ರಾಜ್ಯಕ್ಕೆ ಮಾದರಿಯಾದ ಕಾರ್ಯಕ್ರಮ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…