News Karnataka Kannada
Tuesday, May 07 2024
ಕರಾವಳಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ತುಳುನಾಡಿನ ಧ್ವಜ ಹಾರಾಟ

Photo Credit :

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ತುಳುನಾಡಿನ ಧ್ವಜ ಹಾರಾಟ

ಬೆಳ್ತಂಗಡಿ: ತುಳುನಾಡ ಧ್ವಜ ಎಂದು ಹೇಳಲಾಗುತ್ತಿರುವ ಬಾವುಟವೊಂದನ್ನು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭ ಹಾರಿಸಿರುವ ವಿದ್ಯಮಾನ ಬೆಳ್ತಂಗಡಿ ಬಸ್‍ನಿಲ್ದಾಣದಲ್ಲಿ ನಡೆದಿದೆ.

ಅನಧಿಕೃತವಾಗಿರುವ ತುಳು ನಾಡ ಧ್ವಜವನ್ನು ಬೆಳ್ತಂಗಡಿ ಬಸ್ ನಿಲ್ದಾಣ ಕಟ್ಟೆಯಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಹಾರಿಸಿದ್ದಾರೆ.

ಪ್ರತ್ಯೇಕ ತುಳುನಾಡ ಘೋಷಣೆಗೆ ಹಲವು ವರ್ಷಗಳಿಂದ ಕೂಗು ಕೇಳಿ ಬರುತ್ತಿದ್ದ ನಡುವೆಯೇ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಕನ್ನಡ ಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣದ ಮುಂಭಾಗವಿರುವ ಕರ್ನಾಟಕ ಕಾರ್ಮಿಕರ ಹಿತರಕ್ಷಣಾ ವೇದಿಕೆಯ ಕನ್ನಡ ಧ್ವಜ ಕಟ್ಟೆಯಲ್ಲಿ ನವೆಂಬರ್ 1 ರಂದು ಬೆಳ್ಳಂಬೆಳಗ್ಗೆ ತುಳುನಾಡ ಧ್ವಜ ಹಾರಿಸಿ ಕನ್ನಡ ಧ್ವಜವನ್ನು ಕೆಳಭಾಗದಲ್ಲಿ ಹಾರಿಸುವ ಕೃತ್ಯವೆಸಗಲಾಗಿದೆ. ಮಧ್ಯರಾತ್ರಿ ಈ ಕೃತ್ಯ ಮಾಡಿರುವುದಾಗಿ ತಿಳಿದು ಬಂದಿದೆ.

ಮಧ್ಯಾಹ್ಮ 12 ರವರೆಗೂ ಧ್ವಜ ಹಾರಾಡುತ್ತಿದ್ದು, ಯಾವೊಬ್ಬ ಇಲಾಖೆ ಅಧಿಕಾರಿಗಳ ಗಮನಕ್ಕೂ ಬಾರದಿರುವುದು ವಿಪರ್ಯಾಸವಾಗಿತ್ತು. ಮತ್ತೊಂದೆಡೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗೇಟ್ ಮುಂಭಾಗವೂ ತುಳುನಾಡ ಧ್ವಜ ಕಟ್ಟಿ ಹೋಗಿರುವುದು ಹಲವು ಗೊಂದಲಗಳಿಗೆ ಎಡೆ ಮಾಡಿಕೊಟ್ಟಿದೆ.

ಪ್ರತ್ಯೇಕ ತುಳುನಾಡು ಘೋಷಣೆಗೆ ದ.ಕ.ಜಿಲ್ಲೆಯಾದ್ಯಂತ ಪರ ವಿರೋಧದ ನಡುವೆಯೇ ನಾಡು ನುಡಿ ಒಂದೇ ಎಂಬ ಧ್ಯೇಯದೊಂದಿಗೆ ಉಸಿರಾಡುವ ಈ ನೆಲದಲ್ಲಿ ಮಾತೃಭಾಷೆಗೆ ಅವಮಾನವೆಸಗಿರುವುದು ಸರಿ ಅಲ್ಲ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ಕೇಳಿ ಬಂದಿದೆ.

ಮಧ್ಯಾಹ್ನದ ಬಳಿಕ ಪೋಲಿಸರು ಬಂದು ಏರಿಸಿರುವ ಧ್ವಜವನ್ನು ತೆರವುಗೊಳಿಸಿ ಎಂದಿನಂತೆ ಕನ್ನಡ ಧ್ವಜವನ್ನು ಆರೋಹಿಸಿದ್ದಾರೆ.

ಹಿಂದೆಯೂ ತಾಲೂಕಿನಲ್ಲಿ ತುಳುನಾಡ ಸಂಘಟನೆ ತುಳು ಧ್ವಜ ಹಾರಿಸಿದ ಸಂದರ್ಭದಲ್ಲಿ ಪೊಲೀಸರು ಬಂಧಿಸಿ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಳಿಸಿದ್ದ ಘಟನೆಯೂ ನಡೆದಿತ್ತು.  

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು