ಬೆಳ್ತಂಗಡಿ: ರಸ್ತೆ ಅಪಘಾತವೊಂದರಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಳೆಂಜ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗ್ರಾಮದ ಪಲ್ಲದಂಗಡಿ ಎಂಬಲ್ಲಿ ಹಲ್ಲಿಂಗೇರಿ ನಿವಾಸಿ ಪುಷ್ಪಾವತಿ(43) ಎಂಬುವರೇ ಮೃತಪಟ್ಟವರು. ಅವರು ಮುದ್ದಿಗೆ ಕಡೆಯಿಂದ ನಾರಾಯಣ ಗೌಡ ಎಂಬವರ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಎದುರಿನಿಂದ ಬಂದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮ ಪುಷ್ಪಾವತಿ ರಸ್ತೆಗೆ ಎಸೆಯಲ್ಪಟ್ಟರು. ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಅವರನ್ನು ಕೂಡಲೇ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿದ್ದಾರೆ.
ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.