Bಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟ ಬಗ್ಗೆ ದರ್ಬೆ ನಿರೀಕ್ಷಣಾ ಮಂದಿರದ ಬಳಿ ಸೆ.14 ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.
ನರಿಮೊಗರು ಶಿಬರ ನಿವಾಸಿ ಅಣ್ಣು ಪೂಜಾರಿ ಎಂಬವರ ಪುತ್ರ ನಟೇಶ್(38ವ)ರವರು ಮೃತಪಟ್ಟವರು. ಅವರು ಪುರುಷಕಟ್ಟೆಯಿಂದ ಪುತ್ತೂರಿಗೆ ಬಂದು ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ದರ್ಬೆ ನಿರೀಕ್ಷಣಾ ಮಂದಿರ ಬಳಿ ಬೈಕ್ ಸ್ಕಿಡ್ ಆಗಿ ಡಾಮರು ರಸ್ತೆಗೆ ಎಸೆಯಲ್ಪಟ್ಟಿದ್ದರು.
ತಲೆಗೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾದರೂ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತರು ತಂದೆ ಅಣ್ಣು ಪೂಜಾರಿ, ಪತ್ನಿ, ಒಂದೂವರೆ ವರ್ಷದ ಮಗುವನ್ನು ಅಗಲಿದ್ದಾರೆ.
ಘಟನೆಯ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ