ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವ ಕಾರ್ಯ ನಡೆಯಬೇಕಾಗಿದೆ : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವ ಕಾರ್ಯ ಇಂದು ನಡೆಯಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಸೋಮವಾರ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ನಾರಾಯಣಗುರುಗಳನ್ನು ಪೂಜಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ ಎಂದು ಶುಭ ಹಾರೈಸಿದರು.
ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭ ಮಾತನಾಡಿ, ಹಿಂಸೆಯ ಭಾವ ನಮ್ಮಲ್ಲಿ ತೊಲಗಬೇಕಿದ್ದರೆ, ನಾರಾಯಣಗುರುಗಳ ತತ್ವಾಧ್ಯಯನ ಅಗತ್ಯ. ಸರ್ವಶ್ರೇಷ್ಠ ಚಿಂತನೆಗಳನ್ನು ನೀಡಿದ ಅದ್ಭುತ ಸಂತ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಪ್ರತಿಪಾದನೆ ಅರಿವು ನಮಗಾಗಬೇಕು. ಪ್ರತಿಯೊಬ್ಬರಲ್ಲೂ ದೇವರನ್ನು ಕಾಣುವ ಅದ್ವೈತ ತತ್ವವನ್ನು ನಾರಾಯಣ ಗುರುಗಳು ಪಾಲನೆ ಮಾಡುತ್ತಿದ್ದರು. ಅಪನಂಬಿಕೆ. ಸಂಘರ್ಷಮಯದ ಇಂದಿನ ಕಾಲಘಟ್ಟದಲ್ಲಿ ನಾರಾಯಣ ಗುರುಗಳ ತತ್ವದ ಅಗತ್ಯವಿದೆ. ನಾರಾಯಣ ಗುರುಗಳು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ. ಮಾನವೀಯ ಮೌಲ್ಯದ ಪ್ರತಿಪಾದಕರು ಎಂದರು. ನಾರಾಯಣ ಗುರುಗಳಂತಹ ಶ್ರೇಷ್ಡ ಸಂತರನ್ನು ಕೀಳಾಗಿ ಮಾತನಾಡಿರುವ ರಾಮಚಂದ್ರ ಗುಹಾ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭ ಹರಿಕೃಷ್ಣ ಬಂಟ್ವಾಳ್ ಹೇಳಿದರು.
ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆ ಸಾರ್ವಕಾಲಿಕ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮಾತನಾಡಿ ಆತ್ಮನಿರ್ಭರ ಪರಿಕಲ್ಪನೆಯನ್ನು ನಾರಾಯಣಗುರುಗಳು ಹೊಂದಿದ್ದರು ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಯಶ್ರೀ ಕರ್ಕೇರ ನಾರಾಯಣಗುರುಗಳ ಜೀವನಚರಿತ್ರೆಯನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಒಬಿಸಿ ಮೋರ್ಚಾ ಮಂಡಲ ಅಧ್ಯಕ್ಷ ಆನಂದ ಶಂಭೂರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಚ್ಚೇಂದ್ರ ಸಾಲಿಯಾನ್ ವಂದಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.
Raksha Deshpande

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

5 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

16 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

47 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

56 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

58 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago