News Karnataka Kannada
Thursday, May 02 2024
ಮಂಗಳೂರು

ಭಂಡಾರಿಬೆಟ್ಟುವಿನಲ್ಲಿ ‘ಬಲೆ ತುಳು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ

Tulu
Photo Credit :

ಮಂಗಳೂರು: ‘ಬಲೆ ತುಳು ಲಿಪಿ ಕಲ್ಪುಗ’ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್‌ ಮತ್ತು ತುಳುನಾಡ ಯುವಸೇನೆ ಬಂಟ್ವಾಳ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ನಡೆಯಿತು.

ಜೈ ತುಳುನಾಡ್‌ ಅಧ್ಯಕ್ಷ ಸುದರ್ಶನ್‌ ಸುರತ್ಕಲ್‌ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಉಪನ್ಯಾಸಕ, ಸಾಹಿತಿ ಚೇತನ್‌ ಮುಂಡಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತುಳುವಿಗೆ ಸುಮಾರು 2500 ವರ್ಷಗಳ ಇತಿಹಾಸ ಇದೆ. ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

ಶಿಕ್ಷಕರಾದ ಜಗದೀಶ ಗೌಡ ಕಲ್ಕಳ ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಜೈ ತುಳುನಾಡ್‌ ಸಂಘಟನೆಯ ಅಧ್ಯಕ್ಷ ಸುದರ್ಶನ್‌ ಸುರತ್ಕಲ್‌ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಳುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಂದಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಳುನಾಡಿನ ಎಲ್ಲ ಅಂಗಡಿ, ಶಾಲೆ, ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಗ್ರಾಪಂ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಳುನಾಡ್‌ ಉಪಾಧ್ಯಕ್ಷ ಉದಯ್‌ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್‌ ಬಸ್ತಿಕೋಡಿ, ತುಳು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. ಧೀರಜ್‌ ಸ್ವಾಗತಿಸಿದರು. ಮಹೇಶ್‌ ವಂದಿಸಿದರು. ಲಿಖಿತ್‌ ರಾಜ್‌ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು