News Karnataka Kannada
Thursday, May 02 2024
ಮಂಗಳೂರು

ಮಂಗಳೂರಿಗೆ ಭಾರತದ ಪ್ರಥಮ ಪ್ರಜೆ ಭೇಟಿ

Ram Nath Kovind 15082021
Photo Credit :

ಮಂಗಳೂರು: ಮುಂದಿನ ತಿಂಗಳು ಮೂರು ದಿನಗಳ ರಾಜ್ಯ ಪ್ರವಾಸದ ಸಂದರ್ಭ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.

ಅ.6 ರಿಂದ 3 ದಿನಗಳ ಕಾಲ ರಾಷ್ಟ್ರಪತಿ ಅವರು ರಾಜ್ಯ ಪ್ರವಾಸ ನಡೆಸಲಿದ್ದಾರೆ. ಸದ್ಯದ ವೇಳಾ ಪಟ್ಟಿಯಂತೆ ಮೊದಲು ಬೆಂಗಳೂರು ಹಾಗೂ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಂಗಳೂರಿಗೆ ಆಗಮಿಸಲಿದ್ದಾರೆ.

ಅ.7ರಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಸರ್ಕ್ಯೂಟ್‌ ಹೌಸ್‌ನಲ್ಲಿ ವಾಸ್ತವ್ಯವಿರಲಿದ್ದಾರೆ. ಅ.8ರಂದು ಹೆಲಿಕಾಪ್ಟರ್‌ ಮೂಲಕ ಶೃಂಗೇರಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಮಂಗಳೂರಿಗೆ ವಾಪಸ್ಸಾಗಲಿದ್ದು, ಸರ್ಕ್ಯೂರ್ಟ್ ಹೌಸ್‌ನಲ್ಲಿ ವಾಸ್ತವ್ಯ ಇರಲಿದ್ದಾರೆ.

ಹಲವು ವರ್ಷಗಳ ಬಳಿಕ ರಾಷ್ಟ್ರಪತಿಯವರು ಮಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯವರು ಮಂಗಳೂರಿನಲ್ಲಿ ಎರಡು ದಿನ ವಾಸ್ತವ್ಯವಿದ್ದರೆ ಅದು ನಗರದ ಇತಿಹಾಸದಲ್ಲಿ ಮೊದಲ ಬಾರಿಯದ್ದಾಗುತ್ತದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡಕ್ಕೂ ಅಧಿಕ ಬಾರಿ ಮಂಗಳೂರಿಗೆ ಆಗಮಿಸಿ, ವಾಸ್ತವ್ಯದಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು