ಮಂಗಳೂರು: ದಾಖಲೆಯಿಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂದರು ಪೊಲೀಸರು ಶನಿವಾರ ಬೆಳಗ್ಗೆ ಕಾರ್ ಸ್ಟ್ರೀಟ್ ನಲ್ಲಿ ಬಂಧಿಸಿದ್ದಾರೆ.
ದಾವಣಗೆರೆಯ ಮಂಜುನಾಥ್ ಎಂಬಾತ ಸುಮರು 24 ಲಕ್ಷ ರೂ. ಹಣ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವರು.
ಶುಕ್ರವಾರ ಕೂಡ ಇದೇ ರೀತಿಯಲ್ಲಿ ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಮಲ್ಲೇಶ್ವರಂ ನಿವಾಸಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿ ಒಂದು ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದರು. ಈ ಮೂಲಕ ಕಾರ್ ಸ್ಟ್ರೀಟ್ ನಲ್ಲಿ ನಡೆಯುತ್ತಿರುವ ಹವಾಲ ಜಾಲವನ್ನು ಭೇದಿಸಿರುವರು.
ದಾಖಲೆ ಇಲ್ಲದೆ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿರುವ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ದೂರು ನೀಡಿದ್ದು, ಉದ್ಯಮಿ ರಾಜು ಎಂಬಾತನ ಕಾರ್ ಸ್ಟ್ರೀಟ್ ನಲ್ಲಿರುವ ಮನೆಗೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವರು.