ಮಂಗಳೂರು: ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ಸ್ಥಾಪನೆ ಮಾಡುವ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಶೀಘ್ರ ಚರ್ಚೆ ನಡೆಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಮಟ್ಟಹಾಕಲು ಕೇಂದ್ರ ದಿಟ್ಟ ಕ್ರಮ ಕೈಗೊಳ್ಳುತ್ತಿದೆ. ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಥಾಪನೆ ಬೇಡಿಕೆ ಬಹಳ ದಿನಗಳಿಂದಲೂ ಕೇಳಿಬರುತ್ತಿದ್ದು, ಇದನ್ನು ಸಕಾರಗೊಳಿಸುವ ಉದ್ದೇಶದಿಂದ ಕೇಂದ್ರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
ಅಫ್ಘಾನಿಸ್ಥಾನದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡುತ್ತಿದೆ. ರಾಜ್ಯದ ನೋಡಲ್ ಅಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಉಮೇಶ್ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಅವರು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಸಂಪರ್ಕಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.