ಮಂಗಳೂರು: ದೀಪಕ್ ರಾವ್ ಹತ್ಯೆಯಾದ ದಿನವೇ ಕಾಟಿಪಳ್ಳದಲ್ಲಿ ನಡೆದ ಮಹಮ್ಮದ್ ಮುಬಶ್ಶೀರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ರೌಡಿ ನಿಗ್ರಹ ದಳದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜನವರಿ 3ರಂದು ಕಾಟಿಪಳ್ಳದಲ್ಲಿ ದೀಪಕ್ ರಾವ್ ನ್ನು ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು. ಅದೇ ದಿನ ಕಾಟಿಪಳ್ಳದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಬಂದರು ನಿವಾಸಿ ಮುಬಶ್ಶೀರ್ ಮೇಲೆ ದಾಳಿಯಾಗಿದೆ. ಇದರ ತನಿಖೆಗೆ ಪೊಲೀಸರು ತಂಡಗಳನ್ನು ರಚಿಸಿಕೊಂಡು ಹುಡುಕಾಟದಲ್ಲಿ ತೊಡಗಿದ್ದರು.
ಪೊಲೀಸರು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದು, ವಿಚಾರಣೆ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದರು.