Categories: ಕರಾವಳಿ

ಮಗಳ ಜತೆ ಆತ್ಮಹತ್ಯೆ ಮಾಡಿಕೊಂಡ ತಂದೆ

ಮೂಲ್ಕಿ: ತನ್ನ ನಾಲ್ಕರ ಹರೆಯದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ನದಿಗೆ ಹಾರಿ ಸಾವಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ನಿಡ್ಡೋಡಿಯ ಮಂಜ ನಿವಾಸಿ ದಿವಾಕರ ಪೂಜಾರಿ (35) ಹಾಗೂ ಧೃತಿ ಯಾನೆ ಚೆನ್ನಿ (4) ಮೃತಪಟ್ಟವರು.  ಮೂಲ್ಕಿ ಬಳಿಯ ಬಪ್ಪನಾಡು ಬಡಗುಹಿತ್ಲು ಗ್ರಾಮದ ಜಳಕದ ಕೆರೆಯ ಶಾಂಭವಿ ನದಿಯ ದಂಡೆಯಲ್ಲಿ ಇಬ್ಬರ ಶವ ಪತ್ತೆಯಾಗುವ ಮೂಲಕ ಪ್ರಕರಣ ಬೆಳಕಿಗೆ ಬಂದಿದೆ. ದಿವಾಕರ ಪೂಜಾರಿಗೆ ಫಲಿಮಾರು ಅವರಾಲು ಮಟ್ಟುವಿನ ಯುವತಿಯೊಂದಿಗೆ ಐದು ವರ್ಷಗಳ‌ ಹಿಂದೆ ಮದುವೆಯಾಗಿತ್ತು. ಈ ದಂಪತಿಯ ಪುತ್ರಿ ಧೃತಿ ಪಡುಬಿದ್ರಿಯ ಸಾಗರ ವಿದ್ಯಾ ಮಂದಿರದಲ್ಲಿ  ಎಲ್‌ಕೆಜಿಯಲ್ಲಿ  ಶಿಕ್ಷಣ ಪಡೆಯುತ್ತಿದ್ದಳು. ಆರ್ಥಿಕ ಮುಗ್ಗಟ್ಟು ತೋರಿದ್ದರಿಂದ ದಿವಾಕರ ಪೂಜಾರಿ ಈ ಕೃತ್ಯ ಎಸೆಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಡಿ.14ರಂದು ಮಾವನ ಮದುವೆಯಲ್ಲಿ ಧೃತಿ ಸಂಭ್ರಮಿಸಿದ್ದಳು. ಘಟನೆಯನ್ನು ಅರಗಿಸಿಕೊಳ್ಳದ ಅವರಾಲು ಮಟ್ಟುವಿನ ಆಕೆಯ ಅಜ್ಜಿ ಮನೆಯಲ್ಲಿ ಈಗ ಶ್ಮಶಾನ ಮೌನ ಆವರಿಸಿದೆ.  ಹಣದ ವಿಷಯದಲ್ಲಿ ಬುಧವಾರ ಪತ್ನಿಯೊಂದಿಗೆ ಜಗಳ ಮಾಡಿಕೊಂಡ ದಿವಾಕರ ಅವರು  ತನ್ನ ಮಗಳನ್ನು ಗುರುವಾರ ಶಾಲೆಯ ಬಸ್ಸಿನಿಂದ ನೇರವಾಗಿ ತನ್ನೊಂದಿಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಶುಕ್ರವಾರ ದಿನ ಪೂರ್ತಿ ಕಳೆದುಕೊಂಡ ಬಾಲಕಿಯ‌ನ್ನು ಹೆತ್ತ ತಾಯಿ ಸಹಿತ ಕುಟುಂಬಿಕರು ತೀವ್ರ ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿಲ್ಲ  ಶನಿವಾರ ಮುಂಜಾನೆ ಬಪ್ಪನಾಡು ಬಳಿಯಲ್ಲಿ ತಂದೆ ಮತ್ತು ಮಗಳ ಶವವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ದಿವಾಕರ ಪೂಜಾರಿಯ ವಿರುದ್ಧ ಮಗಳನ್ನು ಕೊಲೆ ಮಾಡಿದ ಪ್ರಕರಣ ದಾಖಲಾಗಿದೆ.

Desk

Recent Posts

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

3 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

15 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

39 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

39 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

52 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

55 mins ago