ಉಡುಪಿ: ನಗರದ ನಾರ್ತ್ ಶಾಲೆಯ ಮತಗಟ್ಟೆಯಲ್ಲಿ ಪೇಜಾವರ ಹಿರಿಯ ಯತಿ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಅವರು ಮಧ್ಯಾಹ್ನ 1.45 ಸುಮಾರಿಗೆ ಮತ ಚಲಾಯಿಸಿದರು.
ದೇಶ ಹಾಗೂ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಮತ ಚಲಾಯಿಸಿದ್ದೇನೆ. ನಾನು ಸರ್ಕಾರದ ಬಗ್ಗೆ ಭವಿಷ್ಯ ನುಡಿಯಲಾರೆ. ಎಲ್ಲವೂ ದೇವರ ಇಚ್ಛೆ. ಎಲ್ಲರೂ ಮತದಾನ ಮಾಡಬೇಕೆಂದು ಅವರು ಮತದಾನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.