News Karnataka Kannada
Tuesday, May 07 2024
ಕರಾವಳಿ

ಮನೆಗೆ ನುಗ್ಗಿ ವ್ಯಕ್ತಿಯೋರ್ವನ ಕೊಲೆ ಯತ್ನ ಪ್ರಕರಣ: ಆರೋಪಿ ಬಂಧನ

Photo Credit :

ಮನೆಗೆ ನುಗ್ಗಿ ವ್ಯಕ್ತಿಯೋರ್ವನ ಕೊಲೆ ಯತ್ನ ಪ್ರಕರಣ: ಆರೋಪಿ ಬಂಧನ

ಕಾಸರಗೋಡು: ಮನೆಗೆ ನುಗ್ಗಿ ವ್ಯಕ್ತಿಯೋರ್ವನ ಕೊಲೆಗೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಾಸರಗೋಡಿನ ಅಹಮ್ಮದ್ ( 39) ಎಂದು ಗುರುತಿಸಲಾಗಿದೆ. ವಿದ್ಯಾನಗರದ ಮುಹಮ್ಮದ್ ಯೂಸಫ್ ( 62) ಎಂಬವರನ್ನು  ತಲೆಗೆ ಬಡಿದು ಕೊಲೆಗೆತ್ನಿಸಿತ್ತು.  ಅಕ್ಟೊಬರ್  26 ರಂದು  ರಾತ್ರಿ ಹತ್ತು ಗಂಟೆಗೆ ಘಟನೆ ನಡೆದಿದೆ. ಯೂಸಫ್ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದು, ಪತ್ನಿ ಈ ಹಿಂದೆ ಮೃತಪಟ್ಟಿದ್ದು, ಮಗಳು ಗಲ್ಫ್ ನಲ್ಲಿದ್ದಾಳೆ.ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದ್ದು ,  ಮಂಗಳೂರಿಗೆ ಆಸ್ಪತ್ರೆಗೆ ಕೊಂಡೊಯ್ದು  ದಾಖಲಿಸಲಾಯಿತು.

ಆಹಮ್ಮದ್ ಆಗಾಗ ಯೂಸಫ್  ರ  ಮನೆಗೆ  ಬರುತ್ತಿದ್ದು ಈ ಹಿನ್ನಲೆಯಲ್ಲಿ ಪೊಲೀಸರು ಈತನನ್ನು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಕಾಸರಗೋಡಿನಲ್ಲಿ ಮೊಬೈಲ್ ಸರ್ವಿಸ್ ಸೆಂಟರ್ ನಡೆಸುತ್ತಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು