News Karnataka Kannada
Friday, May 17 2024
ಕರಾವಳಿ

ಮರಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಪೇಜಾವರ ಶ್ರೀಗಳಿಂದ ಉಪವಾಸದ ಎಚ್ಚರಿಕೆ

Photo Credit :

ಮರಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಪೇಜಾವರ ಶ್ರೀಗಳಿಂದ ಉಪವಾಸದ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಮರಳು ನೀತಿಯನ್ನು ಸಡಿಲಗೊಳಿಸಿ, ಮರಳು ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಮರಳಿನ ಸಮಸ್ಯೆಗೆ ಪೇಜಾವರ ಶ್ರೀಗಳು ಬೆಂಬಲ ನೀಡಿದ್ದಾರೆ‌.

ಶುಕ್ರವಾರ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಶ್ರೀಗಳು ಭಾಗಿಯಾಗಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದಾರೆ. ಅತಿಯಾದ ಮರಳುಗಾರಿಕೆ ಹಾಗೂ ಸಂಪೂರ್ಣ ನಿಷೇಧ ಹೇರುವುದು ಪರಿಸರ ಹಾನಿಕರ. ಸರ್ಕಾರ ಯೋಗ್ಯ ತೀರ್ಪನ್ನು ಕೈಗೊಂಡು ಜನರಿಗೆ ಸೂಕ್ತ ಪರಿಹಾರ ಒದಗಿಸಬೇಕಿದೆ. ನ.10 ರ ಒಳಗಾಗಿ ಸಮಸ್ಯೆ ಬಗೆಹರಿಯದಿದ್ದರೆ ಉಪವಾಸ ಕೈಗೊಳ್ಳಲಾಗುವುದು ಎಂದು ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಶಾಸಕ ಕೆ.ರಘುಪತಿ ಭಟ್, ಮರಳು ಸಮಸ್ಯೆ ಹೋರಾಟ ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಸದಸ್ಯೆ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
192
Shreyas Vittal

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು