ಕಾರವಾರ: ಮಳೆಗಾಲದ ಕಾರಣದಿಂದ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಬಿಡುವು ನೀಡಲಾಗಿತ್ತು. ಈಗ ಮೀನುಗಾರಿಕೆ ಪ್ರಾರಂಭವಾಗಿ ಮೂರು ದಿನಗಳು ಕಳೆದಿವೆ. ಕೊರೊನಾ ಕಾರಣದಿಂದಾಗಿ ಎರಡು ದಿನಗಳ ಕಾಲ ಮೀನುಗಾರರು ಮೀನುಗಾರಿಕೆಗೆ ಹೋಗಿರಲಿಲ್ಲ. ಆದರೆ ಅವರಿಗೆ ಶುಕ್ರವಾರ ಶುಕ್ರದೆಸೆ ಹೊಡೆದಿದೆ.
ಇಂದು ಕಾರವಾರದಲ್ಲಿ ಮೀನುಗಾರಿಕೆಗೆ ತೆರಳಿದ ಮೀನುಗಾರರಿಗೆ ಬೀಸಿದ ಬಲೆಗೆ ರಾಶಿ ರಾಶಿ ಮೀನುಗಳು ಬಂದು ಬೀಳುತ್ತಿವೆ. ಕಳೆದ ನಾಲ್ಕು ತಿಂಗಳಲ್ಲಿ ಸಮುದ್ರದಲ್ಲಿ ಆದ ಹವಾಮಾನ ಬದಲಾವಣೆ ಮೀನುಗಳ ಸಂತಾನೋತ್ಪತ್ತಿಗೆ ಹೆಚ್ಚು ಪೂರಕವಾಗಿತ್ತು. ಇದೀಗ ಮೀನುಗಳು ಯಥೇಚ್ಚವಾಗಿ ದೊರೆಯುತ್ತಿವೆ. ಲೋಡ್ ಗಟ್ಟಲೆ ಮೀನುಗಳು ಸಿಕ್ಕರೂ ಕೇರಳ, ಆಂಧ್ರ ಭಾಗದಲ್ಲಿ ಲಾಕ್ಡೌನ್ ಇರುವುದರಿಂದ ಉತ್ತಮ ಬೆಲೆ ಸಿಗದಂತಾಗಿದೆ.
ಬೆಳಗಿನಿಂದ ಬಿಡುವುಕೊಟ್ಟಿದ್ದ ಮಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಪ್ರಾರಂಭವಾಗಿದ್ದು, ಜಿಲ್ಲೆಯಾದ್ಯಂತ ಅಬ್ಬರದ ಮಳೆ ಸುರಿಯುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆ ಮಾಹಿತಿ ನೀಡಿ, ಇನ್ನೂ ಮೂರು ದಿನ ಹೆಚ್ಚಿನ ಮಳೆಯಾಗುತ್ತದೆ ಎಂದು ಸೂಚಿಸಿದೆ. ಮಳೆಯ ಹೆಚ್ಚಳದಿಂದ ಮೀನುಗಾರರಿಗೆ ಹೆಚ್ಚಿನ ಮೀನುಗಳು ಸಿಗುವ ನಿರೀಕ್ಷೆ ಇದೆ.
ಮಳೆಯ ಅಬ್ಬರಕ್ಕೆ ಕರಾವಳಿಯಲ್ಲಿ ಮೀನುಗಾರರಿಗೆ ಸುಗ್ಗಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.