News Karnataka Kannada
Saturday, April 27 2024
ಕರಾವಳಿ

ಮಹಿಳೆ ಸುಪಾರಿ ಕೊಲೆ ಶಂಕೆ ; ಗಂಡನ ತೀವ್ರ ವಿಚಾರಣೆ

Woman Murder Brahmavara 13 7 21
Photo Credit :

ಉಡುಪಿ: ಇಲ್ಲಿಗೆ ಸಮೀಪದ ಬ್ರಹ್ಮಾವರದ ಉಪ್ಪಿನಕೋಟೆ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಜುಲೈ.12 ರಂದು ಸಂಭವಿಸಿದ ವಿಶಾಲಾ ಗಾಣಿಗ ಎಂಬ ಮಹಿಳೆಯ ಕೊಲೆಗೆ ಸಂಬಂದಿಸಿದಂತೆ ಮಹಿಳೆಯ ಪತಿ ರಾಮಕೃಷ್ಣ ಗಾಣಿಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕರಣದಲ್ಲಿ ತನಿಖೆಗೆ ಪೊಲೀಸರು ನಾಲ್ಕು ತಂಡ ರಚಿಸಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹೊರ ರಾಜ್ಯದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಫೋನ್ ಕರೆ, ಸಾಮಾಜಿಕ ಜಾಲತಾಣ ಸಹಿತ ಎಲ್ಲ ಆಯಾಮಗಳಲ್ಲೂ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ವಿಶಾಲ ಗಾಣಿಗ ತಮ್ಮ ಫ್ಲಾಟ್‌ ನ ಕೊಠಡಿಯಲ್ಲಿ ವಯರ್‌ನಿಂದ ಕುತ್ತಿಗೆ ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರು ಧರಿಸಿದ್ದ 2 ಲಕ್ಷ ರೂ. ಮೌಲ್ಯದ ಆಭರಣ ನಾಪತ್ತೆಯಾಗಿದ್ದು, ಹಣಕ್ಕಾಗಿ ನಡೆದ ಕೃತ್ಯ ಎಂದು ಆರಂಭದಲ್ಲಿ ಬಿಂಬಿತವಾಗಿತ್ತು.
ಇದನ್ನು ಸುಪಾರಿ ಕೊಲೆ ಎಂದು ಪೋಲೀಸರು ಶಂಕಿಸಿದ್ದು ತನಿಖೆ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು